ಸುದ್ದಿಬಿಂದು ಬ್ಯೂರೋ ವರದಿ
ಜೋಯಿಡಾ : ಉತ್ತರಕನ್ನಡ ಜಿಲ್ಲೆಯ (Uttara Kannada) ತಾಲೂಕಿನ ರಾಮನಗರದ ಜಂಗಲ್ ಬೇಟ್ ಕಡೆಯಿಂದ ಬೈಕ್ ಮೇಲೆ ಗೋಕರ್ಣಕ್ಕೆ ಬರುತ್ತಿದ್ದ ಕೋಲ್ಲಾಪುರದ(Kolhapur) ಯುವಕನಿಗೆ ಕೆಎಸ್ ಆರ್ ಟಿಸಿ ಬಸ್(KSRTC bus accident) ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಬೆಳಗಾವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.
ಕೆಎಸ್ ಆರ್ ಟಿಸಿ ಬಸ್ ದಾಂಡೇಲಿಯಿಂದ ರಾಮನಗರಕ್ಕೆ Ramnagar) ಬರತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿದೆ. ಬಸ್ ಹೆದ್ದಾರಿ ಬದಿಗೆ ಜಾರಿದ್ದು ಬಸ್ ನಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಗಾಯಗೊಂಡ ಬೈಕ್ ಸವಾರನಿಗೆ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಆದರೆ ಹೆಚ್ಚಿನ ಚಿಕಿತ್ಸೆ ಬೇಕಾಗಿರುವುದರಿಂದ ತಕ್ಷಣ ಬೆಳಗಾವಿ ಆಸ್ಪತ್ರೆಗೆ ರವಾನಿಸಲಾಗಿದೆ, ಘಟನಾ ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ಸಂಬಂಧ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ / ಉತ್ತರಕನ್ನಡದಲ್ಲಿ ಭಾರೀ ಮಳೆ; ತದಡಿ-ಗೋಕರ್ಣ, ಬಳಲೆ ಹೆದ್ದಾರಿಗಳಲ್ಲಿ ಗುಡ್ಡಕುಸಿತ

