ಸುದ್ದಿಬಿಂದು ಬ್ಯೂರೋ ವರದಿ

ಕಾರವಾರವಾರ : ಕರಾವಳಿ ಜಿಲ್ಲೆಯಲ್ಲಿ ‌ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ (IMD) ಸೂಚನೆ‌ ನೀಡಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜುಲೈ 23 (ಗುರುವಾರ)ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು- ಅಂಗನವಾಡಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಕೆ ಘೋಷಣೆ‌‌ ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಜೆ ಘೋಷಿಸಿರುವ ದಿನ ಯಾವುದೇ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದ್ದು, ಆದೇಶ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ–2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಇದೇ ವೇಳೆ, ಪೋಷಕರು ತಮ್ಮ ಮಕ್ಕಳನ್ನು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಸಲಾಗಿದೆ.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಯಾವುದೇ ತುರ್ತು ಪರಿಸ್ಥಿತಿಗೆ ತಕ್ಷಣ ಸ್ಪಂದಿಸುವಂತೆ ನಿರ್ದೇಶನ ನೀಡಲಾಗಿದೆ. ಎಲ್ಲಾ ತಾಲ್ಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲು ಸಂಬಂಧಿತ ಇಲಾಖೆಗಳಿಗೂ ಸೂಚಿಸಲಾಗಿದೆ.

ಇದನ್ನೂ ಓದಿ/ ಸಾರಿಗೆ ಬಸ್ ಪಲ್ಟಿ: ವೃದ್ಧೆ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ : ಮೂವರು ಗಂಭೀರ