ಸುದ್ದಿಬಿಂದು ಬ್ಯೂರೋ ವರದಿ
ಹಳಿಯಾಳ : ತಾಲೂಕಿನ ಕೆಸರೊಳ್ಳಿ ಗ್ರಾಮದಲ್ಲಿ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಪ್ರಕರಣದಲ್ಲಿ ಬಿಜೆಪಿ ಜಿಲ್ಲಾ ಒಬಿಸಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವರ ವಿರುದ್ಧ ಆರೋಪ ಕೇಳಿಬಂದಿದೆ.
ಗಣಪತಿ ಸಹದೇವ್ ಕರೆಂಜೇಕರ್ (ಅಲಿಯಾಸ್ ಅಜೋಬಾ) ಅವರು ತಮ್ಮ ಸಹೋದರರು ಹಾಗೂ ಕುಟುಂಬದ ಸದಸ್ಯರೊಂದಿಗೆ ಸೇರಿ ಮೀನಿನ್ ಸೋಜ್ ಎಂಬಾತನನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಳಿಯಾಳ ತಾಲೂಕಿನಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಘಟನೆಯ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಇದೇ ವೇಳೆ, ಕರೆಂಜೇಕರ್ ವಿರುದ್ಧ ಈ ಹಿಂದೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ದಾಖಲಾಗಿರುವುದಾಗಿ ಸ್ಥಳೀಯರು ಆರೋಪಿಸಿದ್ದು, ಈ ಘಟನೆಯ ನಂತರ ಅವರ ವರ್ತನೆ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದುವರಿದಿದ್ದು, ಅಧಿಕೃತ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.
ಇದನ್ನೂ ಓದಿ/ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಅಘನಾಶಿನಿ: ಸರಕುಳಿ ಸೇತುವೆ ಜಲಾವೃತ ಸಾಧ್ಯತೆ



