ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ನಗರದ ಜೆ.ಎನ್. ರಸ್ತೆಯ ಮಡಪ್ಲಸ್ ಮೆಡಿಕಲ್ ಮುಂಭಾಗದಲ್ಲಿ ಸೋಮವಾರ ಸಂಜೆ ನಡೆದ ಹಲ್ಲೆ ಪ್ರಕರಣವೊಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ಮೂವರು ಯುವಕರ ತಂಡವೊಂದು ಓರ್ವ ಯುವಕನ ಮೇಲೆ ಏಕಾಏಕಿ ದಾಳಿ ನಡೆಸಿ, ಬಳಿಕ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ.
ಮೂವರು ಯುವಕರು ವ್ಯಕ್ತಿಯೊಬ್ಬನ ಮೇಲೆ ಏಕಾಏಕಿಯಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ನಂತರ ಆರೋಪಿಗಳು ಸ್ಥಳದಿಂದ ತೆರಳಿದ್ದು, ಹಲ್ಲೆಗೊಳಗಾದ ಯುವಕ ಕೂಡ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ಹೆಸರು ಹಾಗೂ ಹಲ್ಲೆ ನಡೆಸಿದ ಆರೋಪಿಗಳ ಗುರುತು ಪತ್ತೆಯಾಗಿಲ್ಲ. ಹಲ್ಲೆಗೆ ನಿಖರ ಕಾರಣ ಏನು ಎಂಬುದು ಕೂಡ ತನಿಖೆಯಿಂದಲೇ ತಿಳಿದುಬರಬೇಕಾಗಿದೆ.
ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಡಿವೈಎಸ್ಪಿ ಶಿವಾನಂದ ಮದರಕಂಡಿ, ಸಿಪಿಐ ಶಿವಾನಂದ ಅಂಬಿಗೇರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಹಲ್ಲೆ ನಡೆಸಿದವರ ಹಾಗೂ ಹಲ್ಲೆಗೊಳಗಾದ ವ್ಯಕ್ತಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಈ ಕುರಿತು ದಾಂಡೇಲಿ ಪೊಲೀಸರು ಪ್ರಕರಣದ ಮಾಹಿತಿ ಕಲೆಹಾಕುತ್ತಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ/“ಕಾಲೇಜು ವಿದ್ಯಾರ್ಥಿಗಳಿಗೆ HIV ತಪಾಸಣೆ : ಆರೋಗ್ಯ ಇಲಾಖೆಯಿಂದ ಮಹತ್ವದ ಹೆಜ್ಜೆ

