ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಭಟ್ಕಳ ಶಾಸಕ ಮಂಕಾಳ್ ಎಸ್. ವೈದ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯದ ವಿವಿಧ ಭಾಗಗಳ ಮೀನುಗಾರ ಸಮುದಾಯದ ಮುಖಂಡರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣ ಎಕ್ಸ್ ಖಾತೆ ಮೂಲಕ ಅಭಿಯಾನ ಆರಂಭಿಸಿದ್ದಾರೆ.
ಮಂಕಾಳ್ ವೈದ್ಯ ಅವರು ರಾಜ್ಯದ ಕರಾವಳಿ ಭಾಗದ ಪ್ರಮುಖ ನಾಯಕರಾಗಿದ್ದು, ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸಚಿವ ಸಂಪುಟದಲ್ಲಿ ಮೀನುಗಾರಿಕೆ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರಿಂದ ಮೀನುಗಾರ ಸಮುದಾಯದಲ್ಲಿ ಅವರಿಗೆ ವಿಶೇಷ ಬೆಂಬಲವಿದೆ ಎನ್ನಲಾಗುತ್ತಿದೆ. ಮಂಕಾಳ್ ವೈದ್ಯ ಅವು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರ ಸಮುದಾಯವನ್ನು ಪ್ರತಿನಿಧಿಸಿದ ಏಕೈಕ ಶಾಸಕರಾಗಿದ್ದರು.
ಪ್ರಾತಿನಿಧ್ಯವನ್ನು ಪರಿಗಣಿಸಿ ಈ ಹಿಂದೆ ಮಂಕಾಳ್ ವೈದ್ಯ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಇದೀಗ ಡಿ.ಕೆ. ಶಿವಕುಮಾರ್ ಸಚಿವ ಸಂಪುಟ ರಚನೆ ವೇಳೆ ಆರಂಭಿಕ ಹಂತದಲ್ಲಿ ಮಂಕಾಳ್ ವೈದ್ಯ ಅವರ ಹೆಸರು ಸಚಿವರ ಪಟ್ಟಿಯಲ್ಲಿ ಸೇರಿತ್ತು, ಈ ಹಿನ್ನೆಲೆಯಲ್ಲಿ #MankalVaidya ಸೇರಿದಂತೆ ವಿವಿಧ ಹ್ಯಾಶ್ಟ್ಯಾಗ್ಗಳನ್ನು ಬಳಸಿ ಎಕ್ಸ್ನಲ್ಲಿ ಅಭಿಯಾನ ನಡೆಸುತ್ತಿರುವ ಬೆಂಬಲಿಗರು, ಮೀನುಗಾರ ಸಮುದಾಯಕ್ಕೆ ನ್ಯಾಯಯುತ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಮಂಕಾಳ್ ವೈದ್ಯ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ/ಮತ್ತೊಮ್ಮೆ ಸಚಿವರಾದ ಮಂಕಾಳ್ ವೈದ್ಯ; ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ

