ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಕಳೆದ ನಾಲ್ಕೈದು ದಶಕಗಳಿಂದ ಕಾಂಗ್ರೆಸ್‌ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಂದಿರುವ ಹಿರಿಯ ಮುಖಂಡ ಹೊನ್ನಪ್ಪ ನಾಯಕ (ಹೊನ್ನಪ್ಪಣ್ಣ) ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಲಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ದಿ‌. ಶಾಸಕ ಮೋಹನ ಶೆಟ್ಟಿ ಅವರ ಶಾಸಕ ಅವಧಿಯಲ್ಲಿ ಕುಮಟಾ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಹೊನ್ನಪ್ಪ ನಾಯಕ, ಸತತ ಎರಡು ಬಾರಿ ಜಿಲ್ಲಾ ಪಂಚಾಯತ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸಿರುವ ಅವರು, ಮಿರ್ಜಾನ ಹಾಗೂ ಕತ್ತಗಾಲ ಜಿಲ್ಲಾ ಪಂಚಾಯತ ಕ್ಷೇತ್ರಗಳಿಂದ ಜಿಲ್ಲಾ ಪಂಚಾಯತಕ್ಕೆ ಆಯ್ಕೆಯಾಗಿದ್ದರು.

ಪಕ್ಷದ ಸಂಘಟನೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿರುವ ಹೊನ್ನಪ್ಪ ನಾಯಕ ಅವರು, ಕಾಂಗ್ರೆಸ್‌ನ ಹಿರಿಯ ನಾಯಕರು ಹಾಗೂ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಪಕ್ಷದ ವಿವಿಧ ಹಂತಗಳಲ್ಲಿ ಸಂಘಟನಾ ಜವಾಬ್ದಾರಿಗಳನ್ನು ನಿರ್ವಹಿಸಿರುವ ಅನುಭವವೂ ಅವರಿಗಿದೆ. ಪ್ರಸ್ತುತ ರಾಜ್ಯದಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ವಿಚಾರ ಚರ್ಚೆಯಲ್ಲಿರುವ ಹಿನ್ನೆಲೆಯಲ್ಲಿ, ಪಕ್ಷಕ್ಕಾಗಿ ದೀರ್ಘಕಾಲದಿಂದ ದುಡಿದಿರುವ ಹಿರಿಯ ಕಾರ್ಯಕರ್ತರು ಹಾಗೂ ಮುಖಂಡರಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಹೊನ್ನಪ್ಪ ನಾಯಕ ಅವರ ಹೆಸರೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ.
ಆದರೆ, ಈ ಬಗ್ಗೆ ಈಗಾಗಲೇ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಹ ಹೊನ್ನಪ್ಪ ನಾಯಕ ಅವರಿಗೆ ನಿಗಮಂಡಳಿಯಲ್ಲಿ ಸ್ಥಾನ ಮಾನ‌ನೀಡುವಂತೆ ವರಿಷ್ಠರ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದಾರೆನ್ನಲಾಗಿದೆ. ಇದಕ್ಕೆ ಪಕ್ಷದ ನಾಯಕರು ಸಹ ಒಂದು ಹಂತದಲ್ಲಿ ಸಮ್ಮತಿ ಸೂಚಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ..

ಇದನ್ನೂ ಓದಿ/ಗಿಬ್ ಸರ್ಕಲ್ ಬಳಿ ಕಂಟೇನರ್ ಡಿಕ್ಕಿ: ಪಾದಚಾರಿಗೆ ಗಾಯ