ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಮಾಂಕಾಳ ವೈದ್ಯ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಅಭಿನಂದಿಸಿದರು.

ವಿಧಾನಸಭೆಯಲ್ಲಿ ಮಾಂಕಾಳ ವೈದ್ಯ ಅವರು ಅವಿರೋಧವಾಗಿ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸಿಎಂ ಡಿ.ಕೆ. ಶಿವಕುಮಾರ್ ಅವರು ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಕಲಾಪವನ್ನು ಸುಗಮವಾಗಿ ನಡೆಸುವಲ್ಲಿ ಉಪಸಭಾಧ್ಯಕ್ಷರಾಗಿ ಮಾಂಕಾಳ ವೈದ್ಯ ಅವರು ಪ್ರಮುಖ ಪಾತ್ರ ವಹಿಸಲಿ ಎಂದು ಶುಭಕೋರಲಾಯಿತು.

ಈ ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿರುವ ಮಾಂಕಾಳ ವೈದ್ಯ ಅವರಿಗೆ ಇದೀಗ ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನದ ಜವಾಬ್ದಾರಿ ದೊರೆತಿದೆ.

ಇದನ್ನೂ ಓದಿ/ಅಂಕೋಲಾದಲ್ಲಿ ಮುಖ್ಯಶಿಕ್ಷಕನ ಮನೆಗೆ ಇಡಿ ದಾಳಿ