ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ವಾಲಗಳ್ಳಿಯ ಜಡ್ಡಿಕೆರೆಯಲ್ಲಿ ನಡೆದಿದ್ದಯ ಘಟನೆ ಬಳಿಕ ಸ್ಥಳಕ್ಕೆ ಆಗಮಿಸಿದ ಕುಮಟಾ ಪೊಲೀಸ್ ಠಾಣೆಯ ಪಿಎಸ್ಐ ಖಾದರ್ ಭಾಷಾ ಅವರು ಸ್ವತಃ ಕೆರೆಗೆ ಜಿಗಿದು ವಿದ್ಯಾರ್ಥಿಯ ಮೃತದೇಹವನ್ನು ಪತ್ತೆಹಚ್ಚಿ ಮೇಲಕ್ಕೆತ್ತುವ ಮೂಲಕ ಸಾಹಸ ಮೆರೆದಿದ್ದಾರೆ.
ವಾಲಗಳ್ಳಿಯ ಜಡ್ಡಿಕೆರೆಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಕುಮಟಾ ತಾಲೂಕಿನ ಹೆಗಡೆ ಗ್ರಾಮದ ಗುನಗನಕೇರಿಯ 18ವರ್ಷದ ಪ್ರಶಾಂತ ಮುಕ್ರಿ ಎಂಬಾತ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಕುಮಟಾ ಪೊಲೀಸರು ಧಾವಿಸಿದ್ದಾರೆ.
ಈ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗದ ಹಿನ್ನೆಲೆಯಲ್ಲಿ, ಕುಮಟಾ ಪೊಲೀಸ್ ಠಾಣೆಯ ಪಿಎಸ್ಐ ಖಾದರ್ ಭಾಷಾ ಅವರ ಕೆರೆಗೆ ಇಳಿದು ಮೃತದೇಹಕ್ಕಾಗಿ ಶೋಧ ನಡೆಸಿದ್ದಾರೆ. ಬಳಿಕ ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಯ ಮೃತದೇಹವನ್ನು ಪತ್ತೆಹಚ್ಚಿ ಮೇಲಕ್ಕೆತ್ತಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಸ್ವತಃ ಕೆರೆಗೆ ಜಿಗಿದು ಮೃತದೇಹ ಹೊರತೆಗೆದಿರುವುದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಘಟನೆ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಇದನ್ನೂ ಓದಿ/ ವಾಲಗಳ್ಳಿ ಜಡ್ಡಿಕೆರೆಗೆ ಈಜಲು ಹೋದ ಹೆಗಡೆ ಗ್ರಾಮದ ವಿದ್ಯಾರ್ಥಿ ಸಾವು

