ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ಬಿಡಾಡಿ ಹೋರಿಗಳೆರಡು ಕಾಳಗ ನಡೆಸಿ ಮನೆಗೆ ಹಾನಿ ಮಾಡಿ, ದ್ವಿಚಕ್ರ ವಾಹನವನ್ನು ಜಖಂಗೊಳಿಸಿದ ಘಟನೆ ಮಂಗಳವಾರ ಮಾರುತಿ ನಗರದಲ್ಲಿ ನಡೆದಿದೆ.

ಬಿಡಾಡಿ ಹೋರಿಗಳು ಪರಸ್ಪರ ಕಾಳಗ ನಡೆಸುತ್ತಾ ಅತ್ತಿಂದಿತ್ತ ಓಡಾಡಿ, ಹತ್ತಿರದಲ್ಲಿದ್ದ ಬಸವ ಹಳೆಮನಿ ಎಂಬವರ ಮನೆಯೊಳಗೆ ನುಗ್ಗಲು ಯತ್ನಿಸಿ, ಮನೆಯ ಮುಂಭಾಗದ ಮೇಲ್ಛಾವಣಿಯ ಶೀಟ್‌ಗಳನ್ನು ಕೆಡವಿವೆ. ಅಲ್ಲದೆ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಜಖಂಗೊಳಿಸಿವೆ. ಈ ಘಟನೆಯಿಂದ ಬಸವ ಹಳೆಮನಿಯವರಿಗೆ ಸಾಕಷ್ಟು ನಷ್ಟ ಸಂಭವಿಸಿದೆ.

ದಾಂಡೇಲಿ ನಗರದಲ್ಲಿ ಇತ್ತೀಚಿನ ಕೆಲವು ವರ್ಷಗಳಿಂದ ಬಿಡಾಡಿ ದನ-ಕರುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಿಯಂತ್ರಣ ಕಷ್ಟಸಾಧ್ಯ ಎನ್ನುವ ಮಟ್ಟಕ್ಕೆ ತಲುಪಿದೆ. ಬಿಡಾಡಿ ದನ-ಕರುಗಳ ಹಾವಳಿಯಿಂದ ಸಾಕಷ್ಟು ವಾಹನ ಅಪಘಾತಗಳು ಸಂಭವಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಬಿಡಾಡಿ ದನ-ಕರುಗಳ ಮಾಲೀಕರನ್ನು ಪತ್ತೆಹಚ್ಚಿ, ಪ್ರಕರಣ ದಾಖಲಿಸಿ ದಂಡ ವಿಧಿಸುವ ಕಾರ್ಯ ಆರಂಭಿಸದಿದ್ದರೆ ನಿಯಂತ್ರಣ ಕಷ್ಟಸಾಧ್ಯ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.

ಇದನ್ನೂ ಓದಿ/300 ಕೋಟಿ ಆಸ್ತಿ ಪ್ರಕರಣ; ಕಾರವಾರದಲ್ಲಿ ಸಿದ್ದೀಕ್ ಮನೆಗೆ ಇಡಿ ದಾಳಿ