ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ :ಇಲ್ಲಿನ ಅರಬ್ಬಿ ಸಮುದ್ರ ವ್ಯಾಪ್ತಿಯ ಅಂಜುದೀವ್ ನಡುಗಡ್ಡೆ ಸಮೀಪ ಮೀನುಗಾರಿಕಾ ಬೋಟ್ವೊಂದು ಆಕಸ್ಮಿಕವಾಗಿ ಮುಳುಗಡೆಯಾಗಿದ್ದು, ಅದರಲ್ಲಿದ್ದ 24 ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಅಂಕೋಲಾ ತಾಲೂಕಿನ ಬೆಳ್ಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಹೆಸರಿನ ಈ ಬೋಟ್, ಬೆಳಂಬರ್ನಿಂದ ಮೀನುಗಾರಿಕೆಗೆ ತೆರಳಿದ್ದಾಗ ಈ ಅನಾಹುತ ಸಂಭವಿಸಿದೆ. ಸಮುದ್ರದಲ್ಲಿ ಬೋಟ್ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ತಕ್ಷಣವೇ ಕಾರ್ಯಾಚರಣೆ ನಡೆಸಿ, ಬೋಟ್ನಲ್ಲಿದ್ದ ಎಲ್ಲಾ 24 ಮೀನುಗಾರರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.
ರಕ್ಷಿಸಲ್ಪಟ್ಟ ಮೀನುಗಾರರನ್ನು ಕಾರವಾರದ ದಂಡೆಗೆ ಸುರಕ್ಷಿತವಾಗಿ ಕರೆತರಲಾಗಿದೆ.ಘಟನೆಯಿಂದಾಗಿ ಸುಮಾರು ₹ 50 ಲಕ್ಷಕ್ಕೂ ಹೆಚ್ಚು ಮೌಲ್ಯದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

