ಸುದ್ದಿಬಿಂದು ಬ್ಯೂರೋ ವರದಿ

ಕುಮಟಾ: ಕುಮಟಾ ಉಪವಿಭಾಗದ 33 ಕೆ.ವಿ. ಗೋಕರ್ಣ ಮಾರ್ಗದಲ್ಲಿ ಜಂಗಲ್ ಕಟ್ಟಿಂಗ್ (ಕಾಡು ಕಟಾವು) ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸೆ. 2ರ ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆವರೆಗೆ ಮಾದನಗೇರಿ, ಗೋಕರ್ಣ, ತದಡಿ, ಬಂಕಿಕೊಡ್ಲ, ಬಿಜೂರು, ಗಂಗಾವಳಿ, ಓಂ ಬೀಚ್, ಮಿರ್ಜಾನ್, ಕೊಡಣಿ, ನಾಗೂರು, ಖಂಡಗಾರ, ಬರ್ಗಿ, ಉಪ್ಪಿನಪಟ್ಟಣ, ದಿವಗಿ ಸೇರಿದಂತೆ 33 ಕೆ.ವಿ. ಗೋಕರ್ಣ ಮಾರ್ಗದ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಕುಮಟಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪ್ರದೇಶಗಳ ವಿದ್ಯುತ್ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

 ಇದನ್ನೂ ಓದಿ/ರಾಮಕೃಷ್ಣ ಹೆಗಡೆ ಸ್ಮರಣೆಯನ್ನು ಶಾಶ್ವತಗೊಳಿಸುವ ನಿರ್ಧಾರ ಸ್ವಾಗತಾರ್ಹ: ದೀಪಕ ಹೆಗಡೆ ದೊಡ್ಡೂರ್