ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ: ಇಲ್ಲಿನ ಮುಖ್ಯ ಕಡಲ ತೀರದಲ್ಲಿ ಬುಧವಾರ ಬೆಳಗ್ಗೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿ ಬೆಂಗಳೂರು ಉತ್ತರದ ದಾಸರಹಳ್ಳಿ ನಿವಾಸಿ ಜೆ.ಎಸ್. ವೆಂಕಟೇಶ್ (68) ಎಂದು ಗುರುತಿಸಲಾಗಿದೆ. ಈತನ ಶವ ರಾಮತೀರ್ಥ ಸಮುದ್ರದ ನೀರಿನಲ್ಲಿ ಶವ ತೇಲಾಡುತ್ತಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಬೀಚ್ ಸಿಬ್ಬಂದಿಗೆ ಮಾಹಿತಿ ನೀಡಿದ್ದು,ಬಳಿಕ ಬೀಚ್ ಸೂಪರ್ವೈಸರ್ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸಮುದ್ರದ ಅಲೆಗಳೊಂದಿಗೆ ತೇಲಿ ಬಂದಿದ್ದ ಶವ ಗೋಕರ್ಣ ಮುಖ್ಯ ಕಡಲ ತೀರಕ್ಕೆ ಬಂದು ಬಿದ್ದಿದೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಗೋಕರ್ಣದ ಕರ್ತವ್ಯನಿರತ ಜೀವರಕ್ಷಕ ಸಿಬ್ಬಂದಿ ಸ್ಥಳಕ್ಕೆ ತೆರಳಿ, ಸಮುದ್ರದಿಂದ ಮೇಲಕ್ಕೆ ತಂದಿದ್ದು, ಗೋಕರ್ಣದ ಶವಗಾರದಲ್ಲಿ ಇಡಲಾಗಿದೆ.
ಸ್ಥಳದಲ್ಲಿ ಗೋಕರ್ಣ ಪೊಲೀಸ್ ಸಿಬ್ಬಂದಿ, ಬೀಚ್ ಸೂಪರ್ವೈಸರ್ ರವಿ ನಾಯ್ಕ್, ಜೀವರಕ್ಷಕ ಸಿಬ್ಬಂದಿಗಳಾದ ರೋಷನ್ ಖಾರ್ವಿ, ಮೋಹನ ಅಂಬಿಗ, ಶಿವಪ್ರಸಾದ್ ಅಂಬಿಗ ಹಾಗೂ ಕರಾವಳಿ ಕಾವಲು ಪಡೆಯ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು, ಕಾರ್ಯಚರಣೆಗೆ ನೆರವಾಗಿದ್ದಾರೆ. ಗೋಕರ್ಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ/ ಕಾಂಗ್ರೆಸ್ ವಿರುದ್ಧ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ರೂಪಾಲಿ ನಾಯ್ಕ

