ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ : ಶಾಸಕರಾದ ಭೀಮಣ್ಣ ನಾಯ್ಕ ಹಾಗೂ ಅವರ ಧರ್ಮಪತ್ನಿ ಗೀತಾ ಭೀಮಣ್ಣ ನಾಯ್ಕ ಅವರು ಇಂದು ಬೈಂದೂರಿನ ಹೋಳಿಹೊಳೆಯಲ್ಲಿರುವ ಶ್ರೀ ಬಿಳಿಸೆಲೆ ವಿನಾಯಕ ದೇವಸ್ಥಾನದ ಪವಿತ್ರ ಪ್ರಾಂಗಣದಲ್ಲಿ ನಡೆಯುತ್ತಿರುವ ಪರಮಪೂಜ್ಯ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳವರ ಚಾತುರ್ಮಾಸ್ಯ ವೃತಾಚರಣೆ ಕಾರ್ಯಕ್ರಮದಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ಪಾಲ್ಗೊಂಡರು.

ಶಿರಸಿ ಮತ್ತು ಸಿದ್ದಾಪುರ ಕ್ಷೇತ್ರಗಳಿಂದ ಆಗಮಿಸಿದ್ದ ನೂರಾರು ಭಕ್ತಾದಿಗಳ ವೃಂದದೊಂದಿಗೆ ಶ್ರೀ ಬಿಳಿಸೆಲೆ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರ ದಂಪತಿ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ಅತ್ಯಂತ ಭಕ್ತಿಯಿಂದ ಪಾದಪೂಜೆ ನೆರವೇರಿಸಿ, ಗುರುಗಳ ದಿವ್ಯ ಆಶೀರ್ವಾದ ಪಡೆದುಕೊಂಡರು. ನಂತರ ಶ್ರೀ ಬಿಳಿಸೆಲೆ ವಿನಾಯಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸಮಸ್ತ ಜನರ ಸುಖ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ ಅವರು, “ಪೂಜ್ಯ ಗುರುಗಳ ಚಾತುರ್ಮಾಸ್ಯ ವ್ರತಾಚರಣೆಯಂತಹ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ನಮ್ಮ ಕ್ಷೇತ್ರದ ಭಕ್ತಾದಿಗಳೊಂದಿಗೆ ಪಾಲ್ಗೊಂಡು ಗುರುಗಳ ಕೃಪೆಗೆ ಪಾತ್ರರಾಗಿರುವುದು ನಮ್ಮ ಪಾಲಿನ ಧನ್ಯತೆ. ಸದ್ಗುರುಗಳ ಆಶೀರ್ವಾದದ ಬಲದಿಂದ ನಮ್ಮ ಶಿರಸಿ – ಸಿದ್ದಾಪುರ ಕ್ಷೇತ್ರವು ಎಲ್ಲ ರಂಗಗಳಲ್ಲೂ ಅಭಿವೃದ್ಧಿ ಹೊಂದಲಿ ಹಾಗೂ ಜನರ ಬಾಳಿನಲ್ಲಿ ಬೆಳಕು ಮೂಡಲಿ ಎಂದು ಪ್ರಾರ್ಥಿಸಿದ್ದೇನೆ” ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳಿಂದ ಆಗಮಿಸಿದ್ದ ಪ್ರಮುಖ ಮುಖಂಡರು, ಸ್ಥಳೀಯ ಧಾರ್ಮಿಕ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದು, ಗುರುಸೇವೆಯಲ್ಲಿ ಭಾಗಿಯಾದರು.

ಇದನ್ನೂ ಓದಿ/ ‘Dr’ ಮಾದರಿಯಲ್ಲಿ ಶಿಕ್ಷಕರಿಗೂ ‘Tr’ ! ಸರ್ಕಾರದ ಹೊಸ ಆದೇಶದಲ್ಲಿ ಏನಿದೆ?