ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ನೂತನ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಪ್ರಸ್ತಾವನೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಅನುಮೋದನೆ ನೀಡಿದ್ದು ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಸಿದ್ದಾಪುರ ಮೂಲದ ಜಿ ಟಿ ನಾಯ್ಕ ಅವರನ್ನ ನೇಮಕ ಮಾಡಿ ಆದೇಶಿಸಲಾಗಿದೆ.

ಜಿ ಟಿ ನಾಯ್ಕ ಅವರು ಮೂಲತಃ ಸಿದ್ಧಾಪುರ ತಾಲೂಕಿನವರಾಗಿದ್ದು, ಸದ್ಯ ಕಾರವಾರ ನ್ಯಾಯಾಲೊಯದಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಇವರು ಹಿಂದಿನಿಂದಲ್ಲೂ ಕಾಂಗ್ರೆಸ್ ಬೆಂಬಲಿಸಿಕೊಂಡು ಬಂದಿದ್ದರು. ಕಳೆದ ಲೋಕಸಭಾ ಚುನಾವಣೆ ವೇಳೆ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಇವರ ಪಕ್ಷ ನಿಷ್ಠೆಯನ್ನ ಗುರುತಿಸಿರುವ ಕಾಂಗ್ರೆಸ್ ಹೈಕಮಾಂಡ ಜಿ ಟಿ ನಾಯ್ಕ ಅರನ್ನ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದೆ.