ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ತಾಲೂಕಿನ ಮಿರ್ಜಾನ ಕೋಟೆ ಕ್ರಾಸ್ ಬಳಿ ಬೈಕ್ ಹಾಗೂ ಆಟೋ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಬರ್ಗಿಯ ಸಮರ್ಥ ಮೂರ್ತಿ ನಾಯ್ಕ ಗಾಯಗೊಂಡ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಸವಾರಿಬ್ಬರೂ ಕುಮಟಾ ಕಡೆಯಿಂದ ಬರ್ಗಿ ಕಡೆ ಬರುತ್ತಿದ್ದ ವೇಳೆ ಒಂದು ಕಡೆಯಿಂದ ಇನ್ನೊಂದು ಕಡೆ ಹೆದ್ದಾರಿ‌ ಕ್ರಾಸ್ ಮಾಡುತ್ತಿದ್ದ ಆಟೋ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಓರ್ವ ಬೈಕ್ ಸವಾರನಿಗೆ ಸೊಂಟದ ಭಾಗದಲ್ಲಿ ಗಾಯವಾಗಿದ್ದರೆ. ಇನ್ನೊರ್ವ ಸವಾರನಿಗೆ ಎರಡು ಕೈಗೆ ಗಾಯವಾಗಿದೆ ಎನ್ನಲಾಗಿದೆ.

ಗಾಯಗೊಂಡ ಇಬ್ಬರನ್ನೂ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.