ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಪಟ್ಟಣದ ಎಪಿಎಂಸಿ (APMC) ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿಟ್ಟಿದ್ದ ಲಾರಿ ಏಕಾಏಕಿಯಾಗಿ ಚಲಿಸಿದ ಪರಿಣಾಮ, ಹೆದ್ದಾರಿ ಬದಿಯಲ್ಲಿ ಏಳನೀರು ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಈಗಷ್ಟೆ ನಡೆದಿದೆ.
ಲಾರಿ ಚಾಲಕ ಹೆದ್ದಾರಿ ಬದಿಯಲ್ಲಿ ತನ್ನ ವಾಹನವನ್ನು ನಿಲ್ಲಿಸಿ ಚಿಕನ್ ಖರೀದಿಸಲು ತೆರಳಿದ್ದ ಎನ್ನಲಾಗಿದೆ. ಈ ವೇಳೆ ನಿಲ್ಲಿಸಿದ್ದ ಲಾರಿ ಏಕಾಏಕಿಯಾಗಿ ಚಲಿಸಿದ್ದು, ಪಕ್ಕದಲ್ಲೇ ಏಳನೀರು ಮಾರಾಟ ಮಾಡುತ್ತಿದ್ದ ಸುಮಾರು 55 ವರ್ಷದ ವ್ಯಕ್ತಿಯ ಮೇಲೆ ಹರಿದಿದೆ. ಪರಿಣಾಮ ಏಳನೀರು ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ಮೃತ ವ್ಯಕ್ತಿಯ ಪಕ್ಕದಲ್ಲೇ ಹಣ್ಣು ವ್ಯಾಪಾರ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಗೂ ಲಾರಿ ಡಿಕ್ಕಿಯಾಗಿ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.ಘಟನೆ ನಡೆದಿರುವುದು ಗಮನಕ್ಕೆ ಬರುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ/ ಮೋದಿ ಜನ್ಮದಿನವಾದ ಇಂದು ‘ಆಶೀರ್ವಾದದ ದೀಪ’ ಬೆಳಗಿಸಿ: ರೂಪಾಲಿ ನಾಯ್ಕ.

