ಸುದ್ದಿಬಿಂದು ಬ್ಯೂರೋ ವರದಿ

ಕಾರವಾರ : ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರವಾರ, ತಾಲೂಕ ಪಂಚಾಯತ್ ಕಾರವಾರ ಹಾಗೂ ಅಮದಳ್ಳಿ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಶನಿವಾರ ವಿಶ್ವ ಮಹಿಳಾ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಯಿತು*

ಕಾರ್ಯಕ್ರಮದ ಉದ್ಘಾಟನೆಯನ್ನು ಎಂ. ಸಿ. ಎ. ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಸ್ವಚ್ಛ ಸಂಕೀರ್ಣ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರವ ಕಸ ಸಂಗ್ರಹ ವಿಂಗಡಣೆಗಾರರು, ವಾಹನ ಚಾಲಕಿಯರು, ನೀರು ಗಂಟಿಯರು, ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿರುವ ಕ್ರೀಡಾಪಟುಗಳು, ಆಶಾ ಕಾರ್ಯಕರ್ತೆಯರು ಹೀಗೆ 8 ಜನ ಮಹಿಳಾ ಸಾಧಕಿಯರಿಗೆ ಸನ್ಮಾನವನ್ನು ಮಾಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಮಹಿಳೆಯರು ಮುಖ್ಯ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರವ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಶುಭ ಕೋರಿದರು.

ವೇದಿಕೆ ಕಾರ್ಯಕ್ರಮದ ಆರಂಭದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಓಟಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಚಾಲನೆ ನೀಡಿದರು*, ಸದ್ರಿ ಕ್ರೀಡೆಯಲ್ಲಿ ವಿಜೇತ ಮೂರು ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ನೀಡಲಾಯಿತು.

ವೇದಿಕೆಯಲ್ಲಿದ್ದ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯ ಮಾತನಾಡಿ, ಮಹಿಳೆಯರು ಸಮಾಜದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಯಾವ ರೀತಿ ಸಿದ್ದರಾಗಬೇಕು ಎನ್ನುವ ಕುರಿತು ಮಾಹಿತಿಯನ್ನು ನೀಡಿದರು,

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದು ಮಾತನಾಡಿ,ಸರ್ಕಾರದಿಂದ ದೊರೆಯುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು,
ಅಮದಳ್ಳಿ ಗ್ರಾ ಪಂ ಯ ಅಧ್ಯಕ್ಷರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಉಪ ಕಾರ್ಯದರ್ಶಿ ಆಡಳಿತ ಜಿಲ್ಲಾ ಪಂಚಾಯತ್, ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು / ಸಿಬ್ಬಂದಿಗಳು, ಎಲ್ಲಾ ತಾಲೂಕಿನ ಮಹಿಳಾ ಸಾಧಕಿಯರು, ಗ್ರಾ ಪಂ ನ ಪಿಡಿಓ ಅಧಿಕಾರಿ, ಗ್ರಾ ಪಂ ನ ಸರ್ವ ಸದಸ್ಯರುಗಳು/ ಸಿಬ್ಬಂದಿಗಳು, ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇದೇ ಸಂದರ್ಭದಲ್ಲಿ ಮಹಿಳೆಯರ ಆರೋಗ್ಯ ನೈರ್ಮಲ್ಯದ ಬಗ್ಗೆ ಉಪನ್ಯಾಸ,ಬೀದಿ ನಾಟಕ, ಮಾಹಿತಿ ಶಿಬಿರ,ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಕುರಿತು ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು..

ಇದನ್ನೂ ಓದಿ