ಸುದ್ದಿಬಿಂದು ಬ್ಯೂರೋ ವರದಿ
ಹಳಿಯಾಳ : ಜನವರಿ 28ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಒಂದು ಕೋಟಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನ ಬಂಧಿಸಿ ಕರೆತರುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ಹಳಿಯಾಳ ತಾಲೂಕಿ ನಿಲವಾಣಿ ಗ್ರಾಮದ ಬಳಿ ನಡೆದಿದೆ.
ಪ್ರಕರಣ ಇಬ್ಬರೂ ಆರೋಪಿಗಳನ್ನು ಮುಂಬೈಯಿಂದ ಅಂಕೋಲಾಕ್ಕೆ ಕರೆದೊಯ್ಯುತ್ತಿರುವಾಗ ಆರೋಪಿಗಳು ಹಳಿಯಾಳ ಸಮೀಪದ ನಿಲವಾಣಿ ಬಳಿ ಮೂತ್ರ ವಿಸರ್ಜನೆಗಾಗಿ ಹೋಗಿದ್ದು, ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಅದನ್ನ ತಪ್ಪಿಸಿಕೊಂಡ ಆರೋಪಿಗಳು ವಾಪಸ್ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಆದರೆ ಪೊಲೀಸರು ಹಲ್ಲೆ ಆಗಿದ್ದರೂ ಸಹ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡದೆ ಬಂಧಿಸಿ ಕರೆತಂದಿದ್ದಾರೆ.
ಬಂಧಿತ ಆರೋಪಿಗಳು ಮಂಗಳೂರು ಮೂಲದ ತಲ್ಲತ್ತ್ ಮತ್ತು ನವಫಾಲ ಎಂಬುವವರಾಗಿದ್ದು, ಸದ್ಯ ಗಾಯಗೊಂಡ ಮೂವರು ಪೊಲೀಸರು ಮತ್ತು ಇಬ್ಬರು ಆರೋಪಿಗಳನ್ನ ಹಳಿಯಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಳಿಯಾಳ ತಾಲೂಕು ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್.ಎಂ ಅವರು ಭೇಟಿ ನೀಡಿ ಪೊಲೀಸರ ಆರೋಗ್ಯವಿಚಾರಿಸಿ ಧೈರ್ಯ ತುಂಬಿದ್ದಾರೆ.
ಇದನ್ನೂ ಓದಿ
- ಹೊನ್ನಾವರದಲ್ಲಿ ಆರ್ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಓವರ್ಲೋಡ್ ಸಾಗಿಸುತ್ತಿದ್ದ 17ಲಾರಿ ವಶಕ್ಕೆ
- ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ? ಡಿಕೆಶಿ ಒಲವು; ಕಾಂಗ್ರೆಸ್ನಲ್ಲಿ ಶುರುವಾಯ್ತು ಹೊಸ ಲೆಕ್ಕಾಚಾರ..!
- ಮೀನುಗಾರಿಕಾ ಬೋಟ್ ಮುಳುಗಡೆ : ಏಳು ಮೀನುಗಾರರ ರಕ್ಷಣೆ
- ಡಿಕೆಶಿ ಜತೆಗೆ 8 ಸಚಿವರ ಪ್ರಮಾಣವಚನ ಸ್ವೀಕಾರ? ಮೊದಲ ಕಂತಲ್ಲೇ ಮಂಕಾಳ್ ವೈದ್ಯ ಸಚಿವರಾಗಲಿದ್ದಾರಾ.!

