ಸುದ್ದಿಬಿಂದು ಬ್ಯೂರೋ ವರದಿ
ನವದೆಹಲಿ : ಕರ್ನಾಟಕ ರಾಜ್ಯದ ಸಾಮಾನ್ಯ ಜನತೆ ಬೆಲೆಯ ಏರಿಕೆಯಿಂದ ನಲುಗಿದ್ದಾರೆ. ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾದ ನಂತರ, ಕೇಂದ್ರ ಸರ್ಕಾರವು ಮತ್ತೊಮ್ಮೆ ದೇಶದ ಜನತೆಗೆ ಆಘಾತ ನೀಡಿದೆ. ಎಲ್ಪಿಜಿ ಅನಿಲ ಸಿಲಿಂಡರ್ ಬೆಲೆ ಪತ್ತನೆಯಾಗಿ ಐವತ್ತು ರೂಪಾಯಿಗಳಷ್ಟು ಹೆಚ್ಚಳವಾಗಿದೆ ಎಂದು ಘೋಷಿಸಿದೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಅವರು ಈ ಮಾಹಿತಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಬೆಲೆ ಏರಿಕೆ ಉಜ್ವಲಾ ಹಾಗೂ ನಾನ್ ಉಜ್ವಲಾ ಗ್ರಾಹಕರಿಗೆ ಕೂಡ ಅನ್ವಯವಾಗುತ್ತದೆ.
ಹೀಗಾಗಿ ಇನ್ನು ಮುಂದೆ ಉಜ್ವಲಾ ಯೋಜನೆಯ ಅಡಿಯಲ್ಲಿ 14.2 ಕೆಜಿ ಸಿಲಿಂಡರ್ಗಾಗಿ 503 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಇತರೆ ಗ್ರಾಹಕರು 853 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಈ ಬೆಲೆ ಏರಿಕೆಯಿಂದ ಗ್ರಾಹಕರಿಗೆ ಮತ್ತೆ ಸಿಲಿಂಡರ್ಗಳ ಬೆಲೆ ಏರಿಕೆ ಆಗಿರುವುದು ಜನತೆಗೆ ಮತ್ತಷ್ಟು ಬಿಸಿಯಾಗಿದೆ.
ಇದನ್ನೂ ಓದಿ
- ಕರಾವಳಿಯಲ್ಲಿ ಭಾರೀ ಮಳೆ: ನಾಳೆ ಎಲ್ಲೆಲ್ಲಿ ಶಾಲೆ–ಕಾಲೇಜುಗಳಿಗೆ ರಜೆ?
- ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರ ಬದ್ಧ: ಉನ್ನತ ಮಟ್ಟದ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ
- ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ : ಬೈಕ್ ಸವಾರನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು,
- ಮೆಹೆಂದಿ ರಂಗು ಮಾಸುವ ಮುನ್ನವೇ ವಿಧಿಯ ಕ್ರೂರ ಆಟ: ಬೈಕ್ ಸ್ಕಿಡ್ ನವವಧು ಸ್ಥಳದಲ್ಲೇ ಸಾವು, ಪತಿ ಗಂಭೀರ..!

