ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಮಂಜುನಾಥ್ ರಾವ್, ಬೆಂಗಳೂರಿನ ಮಧುಸೂದನ್ ರಾವ್ ಹಾಗೂ ಹಾವೇರಿ ಜಿಲ್ಲೆಯ ಭರತ್ ಭೂಷಣ್ ಅವರು ಮೃತಪಟ್ಟಿರುವುದು ಮತ್ತು ಹಲವಾರು ಪ್ರವಾಸಿಗರು ಗಾಯಗೊಂಡಿರುವುದು ತೀವ್ರ ಆಘಾತವನ್ನುಂಟು ಮಾಡಿದೆ.
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ, ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಿಲುಕಿರುವ ಕರ್ನಾಟಕದ ಪ್ರವಾಸಿಗರ ರಕ್ಷಣಾ ಕಾರ್ಯಕ್ಕಾಗಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಲಾಡ್ ಮತ್ತು ವಿಶೇಷ ಅಧಿಕಾರಿಗಳ ತಂಡ ಪಹಲ್ಗಾಮ್ಗೆ ತೆರಳಿದೆ. ಸಚಿವರು ಸದ್ಯ ಅಲ್ಲಿ ನೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.
ಗಾಯಗೊಂಡವರೆಲ್ಲರೂ ಶೀಘ್ರವಾಗಿ ಗುಣಮುಖರಾಗಿ ಸುರಕ್ಷಿತವಾಗಿ ಹಿಂತಿರುಗಲಿ ಎಂದು ಹಾರೈಸುತ್ತೇನೆ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ
- ಕರಾವಳಿಯಲ್ಲಿ ಭಾರೀ ಮಳೆ: ನಾಳೆ ಎಲ್ಲೆಲ್ಲಿ ಶಾಲೆ–ಕಾಲೇಜುಗಳಿಗೆ ರಜೆ?
- ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರ ಬದ್ಧ: ಉನ್ನತ ಮಟ್ಟದ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ
- ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ : ಬೈಕ್ ಸವಾರನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು,
- ಮೆಹೆಂದಿ ರಂಗು ಮಾಸುವ ಮುನ್ನವೇ ವಿಧಿಯ ಕ್ರೂರ ಆಟ: ಬೈಕ್ ಸ್ಕಿಡ್ ನವವಧು ಸ್ಥಳದಲ್ಲೇ ಸಾವು, ಪತಿ ಗಂಭೀರ..!

