ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನ ಅವಮಾನಗೊಳಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ವ್ಯಕ್ತಿಯೋರ್ವನನ್ನು ದಾಂಡೇಲಿ ಪೊಲೀಸರು ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ.

ನಗರದ ಸಂಡೆ ಮಾರ್ಕೆಟ್ ಹತ್ತಿರ ಹಣ್ಣು ಹಂಪಲು ವ್ಯಾಪಾರ ಮಾಡುವ ಅನಿಸ್ ಹುಲ್ಗರ್ ಎಂಬಾತನೇ ಈ ರೀತಿಯ ಅಪಮಾನಕರವಾದ ಫೋಟೋವನ್ನು ಫೇಸ್ ಬುಕ್ ಮೂಲಕ ಶೇರ್ ಮಾಡಿ ಪೊಲೀಸರಿಂದ ಬಂಧನಕ್ಕೊಳಗಾದ ವ್ಯಕ್ತಿಯಾಗಿದ್ದಾನೆ.