ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ‘ಆಪರೇಶನ್ ಸಿಂಧೂರ’ ಬಳಿಕ (operation sindoor) ಭಾರತ–ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಿದ್ದು, ಇದರ ಪರಿಣಾಮ ಚಿನ್ನದ ಬೆಲೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಹೂಡಿಕೆದಾರರು ಚಿನ್ನ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಚಿನ್ನದ ದರ 1ರೂ ಲಕ್ಷ ಗಡಿ ದಾಟಿದೆ.
ಆಲ್ ಇಂಡಿಯಾ ಸರಾಫಾ ಅಸೋಸಿಯೇಷನ್ ನೀಡಿದ ಮಾಹಿತಿಯಂತೆ, ಶೇಕಡಾ 99.9 ಹೊಂದಿರುವ ಚಿನ್ನದ ದರ ಕೇವಲ ಒಂದು ದಿನದಲ್ಲಿ 1,000ರೂ ಏರಿಕೆಯಾಗಿದ್ದು, ಪ್ರಸ್ತುತ 10 ಗ್ರಾಂ ಚಿನ್ನದ ಬೆಲೆ 1,00,350ರೂ ಆಗಿದೆ.
ಯುದ್ಧ ಭೀತಿಯಿಂದ ಷೇರು ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಮನೆಮಾಡಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಭದ್ರ ಹೂಡಿಕೆಗೆ ಚಿನ್ನವನ್ನು ಆಯ್ಕೆಮಾಡುತ್ತಿದ್ದಾರೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗಿದೆ. ಆರ್ಥಿಕ ವಿಶ್ಲೇಷಕರ ಪ್ರಕಾರ, “ಭೌಗೋಳಿಕ ಉದ್ವಿಗ್ನತೆಗಳು ಮತ್ತು ಸೇನೆ ಕಾರ್ಯಾಚರಣೆಗಳು ಚಿನ್ನದ ಬೆಲೆ ಮೇಲೆ ತಕ್ಷಣದ ಪರಿಣಾಮ ಬೀರುತ್ತವೆ. ಈ ಬಾರಿ ‘ಆಪರೇಶನ್ ಸಿಂಧೂರ’ದ ಸುದ್ದಿಯೇ ಈ ತೀವ್ರ ಏರಿಕೆಯ ಪ್ರಮುಖ ಕಾರಣವಾಗಿದೆ” ಎಂಬುದಾಗಿ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




