ಸುದ್ದಿಬಿಂದು ಬ್ಯೂರೋ ವರದಿ
ಶಿರೂರು: ಟೋಲ್ಗೇಟ್ ಒಂದಕ್ಕೆ ಅಂಬುಲೈನ್ಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೋಲ್ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರೂರು ಟೋಲ್ಗೇಟ್ ನಲ್ಲಿ ನಡೆದಿದೆ.
ಅಪಘಾತದ ರಸಭಸಕ್ಕೆ ಟೋಲ್ ಗೇಟ್ ಸಿಬ್ಬಂದಿ ಮಹಾರಾಷ್ಟ್ರ ಮೂಲದ ಸಂದೀಪ್ ಚಾಲಸೇ ಸೂರ್ಯವಂಶಿ (35) ಎಂಬಾತನೆ ಮೃತಪಟ್ಟಿದ್ದಾನೆ. ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಅತೀ ವೇಗದಿಂದ ಬಂದ ಅಂಬುಲೈನ್ಸ್ ಚಾಲಕನ ಅಜಾಗರೂಕತೆಯಿಂದ ಟೋಲ್ ಗೇಟನ ಎ1 ಲೈನ್ ಬದಿಯಲ್ಲಿ ನಿಂತಿದ್ದ ಸಿಬಂದಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮಹಾರಾಷ್ಟ್ರ ಮೂಲದ ಸಂದೀಪ್ ಚಾಲಸೇ ಸೂರ್ಯವಂಶಿಗಂಭೀರ ಗಾಯಗೊಂಡಿದ್ದ ತಕ್ಷಣ ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ.ತೀವ್ರ ರಕ್ತಸ್ರಾವ ಮತ್ತು ಗಂಭೀರ ಗಾಯಗೊಂಡಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾನೆ
ಇದನ್ನೂ ಓದಿ
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ : ರಾಜ್ಯ ಸರ್ಕಾರದಿಂದ ಮರುಪರಿಶೀಲನೆಗೆ ಸಿದ್ಧತೆ
- “ಕಾಲೇಜು ಶುಲ್ಕ ಕಟ್ಟಲು ಉಳಿಸಿದ್ದ ₹10 ಸಾವಿರ ವಾಪಸ್ ಸಿಗಲಿಲ್ಲ; ಮನನೊಂದು 19ರ ವಿದ್ಯಾರ್ಥಿನಿ ಆತ್ಮಹತ್ಯೆ
- ಕುಮಟಾದಲ್ಲಿ ಭೀಕರ ದುರಂತ: ಬಸ್ನ ತೆರೆದ ಡಿಕ್ಕಿ ಬಾಗಿಲು ಬಡಿದು ಕೆಎಸ್ಆರ್ಟಿಸಿ ಚಾಲಕ ಸಾವು
- ಬಸ್-ಬೈಕ್ ಮುಖಾಮುಖಿ ಡಿಕ್ಕಿ.. ಬೈಕ್ ಸವಾರ ಗಂಭೀರ..!

