ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭಾರೀ ಮಳೆಯ ಪರಿಣಾಮವಾಗಿ ಕಾರವಾರ ಶಿರಸಿ ಸಂಪರ್ಕ ಕಲ್ಪಿಸುವ ಹೆದ್ದಾರಿ ಮಿರ್ಜಾನ ಸಮೀಪದ ಬರಗದ್ದೆ ಬಳಿ ಕುಸಿತ ಉಂಟಾಗಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಾರವಾರ ಶಿರಸಿ ಸಂಪರ್ಕ ಕಲ್ಪಿಸುವ ಮಿರ್ಜಾನ ಸಮೀಪದ ಬರಗದ್ದೆ ಬಳಿ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತ ಉಂಟಾಗಿದೆ. ಹೆದ್ದಾರಿ ಕುಸಿತ ಉಂಟಾಗುತ್ತಿರುವುದರಿಂದಾಗಿ ಕಾರವಾರ ಶಿರಸಿ ಸಂಚರಿಸುವ ವಾಹನಗಳನ್ನ ತಡೆಯಲಾಗಿದೆ. ನಿನ್ನೆಯಿಂದಲ್ಲೆ ನಿಧಾನವಾಗಿ ಹೆದ್ದಾರಿ ಬದಿಯಲ್ಲಿ ಕುಸಿತ ಉಂಟಾಗುತ್ತಿದ್ದು, ಇಂದು ಸುರಿದ ಭಾರೀ ಮಳೆಗೆ ಇನ್ನಷ್ಟು ಪ್ರಮಾಣದಲ್ಲಿ ಹೆದ್ದಾರಿ ಕುಸಿತವಾಗಿದೆ.
ಈಗಾಗಲೇ ಇದೆ ಹೆದ್ದಾರಿಯಲ್ಲಿ ದೇವಿಮನೆ ಬಳಿ ಸಣ್ಣ ಪ್ರಮಾಣದಲ್ಲಿ ಗುಡ್ಡಕುಸಿತ ಉಂಟಾಗಿದ್ದು, ಕರಾವಳಿ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಭಯದಲ್ಲೆ ಓಡಾಡಬೇಕಾಗಿದೆ.
ಜೆಜೆಎಂ ಅವೈಜ್ಞಾನಿಕ ಕಾಮಗಾರಿ ಹೆದ್ದಾರಿ ಕುಸಿತಕ್ಕೆ ಕಾರಣ
ಕಳೆದ ತಿಂಗಳು ಜಲ ಜೀವನ ಮಷಿನ್ ಅವರು ಗುಡ್ಡದ ತುದಿಯಲ್ಲಿ ಮಣ್ಣು ತೆಗೆದು ಅವೈಜ್ಞಾನಿಕವಾಗಿ ಮಣ್ಣನ್ನು ಮುಚ್ಚದೇ ಹೋಗಿದ್ದು ಈ ಬಗ್ಗೆ ಸ್ಥಳೀಯರು ಹೆದ್ದಾರಿ ಕುಸಿಯುವ ಬಗ್ಗೆ ಎಚ್ಚರಿಕೆ ನೀಡಿದ್ದರೂ ಸಮರ್ಪಕವಾಗಿ ಕಾಮಗಾರಿ ಮಾಡದೇ ಇರುವುದೇ ಈ ದುರಂತಕ್ಕೆ ಕಾರಣವಾಗಿದ್ದು ಎಂದು ಗ್ರಾಮಸ್ಥರು ಸುದ್ದಿ ಬಿಂದುಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಅವೈಜ್ಞಾನಿಕ ಕಾಮಗಾರಿ ಮಾಡಿ ಕೋಟಿ ಕೋಟಿ ಲೂಟಿ ಮಾಡಿರುವ ಜೆಜೆಎಂ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕಿದೆ ಎನ್ನುವುದು ಸ್ಥಳೀಯ ಒತ್ತಾಯವಾಗಿದೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ
- Big Breaking /ಸುಂಕಸಾಳ ಬಳಿ ಸರಣಿ ಅಪಘಾತ : ಹಲವರಿಗೆ ಗಂಭೀರ ಗಾಯ


