ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇದೀಗ ಮೂರೂರು ಸಮೀಪದ ಮುಸುಗುಪ್ಪ ಬಳಿ ಗುಡ್ಡುಕುಸಿತ ಉಂಟಾಗಿ ಸಂಚಾರ ಬಂದ್ ಮಾಡಿರುವ ಘಟನೆ ನಡೆದಿದೆ.
ಭಾರೀ ಮಳೆಯಿಂದಾಗಿ ಮೂರೂರು ಸಮೀಪದ ಮುಸುಗುಪ್ಪ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡಕುಸಿತ ಉಂಟಾಗಿದ್ದು, ಗುಡ್ಡಕುಸಿತದ ರಭಸಕ್ಕೆ ಭಾರೀ ಗಾತ್ರದ ಕಲ್ಲು ಹಾಗೂ ಮಣ್ಣಿನ ರಾಶಿ ಹೆದ್ದಾರಿಯಲ್ಲಿ ಬಿದ್ದಿದ್ದು, ಸದ್ಯ ಈ ರಸ್ತೆಯಲ್ಲಿ ಸಂಚಾರವನ್ನ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ರಸ್ತೆಯಲ್ಲಿ ಬಿದ್ದಿರುವ ಗುಡ್ಡದ ಮಣ್ಣು ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ