ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ವಿರುದ್ಧ ತಲೆ ಬುಡ ಇಲ್ಲದ್ ಆರೋಪ ಮಾಡುವ ಮೂಲಕ ತಾಲೂಕಿನ ವ್ಯಕ್ತಿಯೊಬ್ಬ ತಾನು ರಾಜಕಾರಣದಲ್ಲಿ ಚಲಾವಣೆಯಲ್ಲಿ ಬರಲು ಪ್ರಯತ್ನಿಸುತ್ತಿದ್ದಾರೆ. ಈ ಜನರ ಅನಾಗರಿಕ ವರ್ತನೆಗೆ ತಾಲೂಕಿನ ಬೈಲೂರು ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಸರಿಯಾದ ಉತ್ತರವನ್ನು ನೀಡಿದ್ದಾರೆ. ಜಿಲ್ಲೆಯ ಉದ್ಯಮಿ ಎಂದು ಹೇಳಿಕೊಳ್ಳುವ ವ್ಯಕ್ತಿ ತನ್ನನ್ನು ಇನ್ನಾದರೂ ತಿದ್ದುಕೊಂಡು ತನ್ನಲ್ಲಿ ಸನ್ನಡತೆ ರೂಪಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕರೇ ಅವರಿಗೆ ಸಾರ್ವಜನಿಕರೇ ಸರಿಯಾದ ಬುದ್ದಿ ಕಲಿಸುತ್ತಾರೆ ಎಂದು ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಹೇಳಿದರು.
ತಾಲೂಕಿನ ಸ್ವಯಂಘೋಷಿತ ಉದ್ಯಮಿಯೊಬ್ಬ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಂಕಾಳು ವೈದ್ಯರ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕರೆದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡುತ್ತ ಈ ವ್ಯಕ್ತಿ ನಮ್ಮ ಸಚಿವರ ವಿರುದ್ಧ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದರ ಮೂಲಕ ವೈಯಕ್ತಿಕವಾಗಿ ತೇಜೋವಧೆ ಮಾಡಿದ್ದಲ್ಲದೆ ಸಚಿವರ ಕುಟುಂಬದ ಸದಸ್ಯರಿಗೆ ಅವಹೇಳನವಾಗುವಂತೆ ಮಾತನಾಡಿದ್ದಾರೆ. ಇದು ಖಂಡನೀಯ ಕಾಂಗ್ರೇಸ್ ಮುಖಂಡರು ಕಾರ್ಯಕರ್ತರು ಆದ ನಾವುಗಳು ಇದನ್ನು ಸಹಿಸುವುದಿಲ. ಈ ವ್ಯಕ್ತಿ ಕೂಡಲೆ ತನ್ನ ಈ ದುಷ್ಕೃತ್ಯ ವನ್ನು ನಿಲ್ಲಿಸಬೇಕು.
ಇನ್ನು ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಶಾಸಕರು ಮುಂದಾಗಿದ್ದಾರೆ. ಇದನ್ನು ಕೂಡ ಸಹಿಸದ ಈ ವ್ಯಕ್ತಿ ಸಚಿವರ ವಿರುದ್ದ ಇಲ್ಲ ಸಲ್ಲದ ಆರೋಪವನ್ನು ಮಾಡಿದ್ದಾರೆ. ಬೈಲೂರಿನಲ್ಲಿ ನಡೆದ ಗ್ರಾಮ ಸಭೆಯಲ್ಲಿ ಸಾರ್ವಜನಿಕರನ್ನು ಎತ್ತಿಕಟ್ಟುವ ಕೆಲಸವನ್ನು ಈ ವ್ಯಕ್ತಿ ಪ್ರಯತ್ನ ಮಾಡಿದ್ದಲ್ಲದೆ ಸಭೆಯಲ್ಲಿ ಇಲ್ಲಸಲ್ಲದ ತಪ್ಪು ಮಾಹಿತಿಯನ್ನು ಅಪಪ್ರಚಾರವನ್ನು ಮಾಡಲು ಪ್ರಯತ್ನಿಸಿದ್ದನ್ನು ಆದರೆ ಬೈಲೂರು ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಇದಕ್ಕೆ ತಕ್ಕ ಉತ್ತರವನ್ನು ನೀಡಿದ್ದಾರೆ.
ಬೈಲೂರು ಪಂಚಾಯತ್ ಸಮಸ್ತ ಸಾರ್ವಜನಿಕರು ಮಲ್ಟಿಸ್ಟೇಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವರಿಗೆ ಬೆಂಬಲವನ್ನು ನೀಡಿದ್ದಾರೆ ಇನ್ನಾದರು ಈ ವ್ಯಕ್ತಿ ತನ್ನನ್ನು ತಾನು ತಿದ್ದಿಕೊಂಡು ತನ್ನ ಹೊಣೆಗೇಡಿತನವನ್ನು ಕೈ ಬಿಡಬೇಕು. ಇಲ್ಲವಾದರೆ ಮುಂದಿನ ದಿನಗಳು ಇದಕ್ಕೆ ಸಾರ್ವಜನಿಕರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಕಾಯ್ಕಿಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜು ನಾಯ್ಕ, ಗ್ಯಾರಂಟಿ ಕಮೀಟಿ ಅಧ್ಯಕ್ಷರಾದ ರಾಜು ನಾಯ್ಕ ಕೊಪ್ಪ ಬೆಳ್ಳೆ ಬೆಳ್ಳೆ ಗ್ರಾಮ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ ನಾಯ್ಕ, ಪಟ್ಟಣ ಪಂಚಾಯತ್ ಸದಸ್ಯ ರಮೇಶ ನಾಯ್ಕ,ಕಿಸಾನ್ ಸಂಘದ ಅಧ್ಯಕ್ಷರಾದ ನಾರಾಯಣ ನಾಯ್ಕ ಸೋಡಿಗದ್ದೆ. ಗ್ಯಾರಂಟಿ ಕಮೀಟಿಯ ಸದಸ್ಯರಾದ ಬಾಸ್ಕರ್ ಮೋಗೆರ್ ಮಂಜುನಾಥ ನಾಯ್ಕ, ಜಟ್ಟಪ್ಪ ನಾಯ್ಕ ಮುಟ್ಟಳ್ಳಿ ವೆಂಕಟೇಶ ದೇವಾಡಿಗ ಹಾಗು ಇನ್ನಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ