ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ತಾಲೂಕಿನ ದೇವಿಮನೆ ಬಳಿ ಕುಸಿತವಾಗಿದ್ದ ಗುಡ್ಡದ ಮಣ್ಣನ್ನ ಈಗಾಗಲೇ ತೆರವು ಮಾಡಲಾಗಿದ್ದು, ಈ ಹಿಂದಿನಂತೆ ಲಘುವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ..
ದೇವಿ ಮನೆ ಗುಡ್ಡದ ಬಳಿ ನಿನ್ನೆ ಸಂಜೆಯ ವೇಳಗೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಇಂದು ಬೆಳಿಗ್ಗೆ ಹೆದ್ದಾರಿಯಲ್ಲಿ ಬಿದ್ದಿದ್ದ ಕಲ್ಲು ಮಣ್ಣುಗಳನ್ನ ಖಾಲಿ ಮಾಡುವ ಮೂಲಕ ಕುಮಟಾ ಶಿರಸಿ ಮಾರ್ಗವಾಗಿ ಸಂಚರಿಸುವ ಲಘು ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇದರಿಂದಾಗಿ ಇದೀಗ ಪುನಃ ಲಘು ವಾಹನ ಸಂಚಾರ ಆರಂಭವಾಗಿದೆ.
https://whatsapp.com/channel/0029VaAvVKA47Xe7I9bdgG31
ಇನ್ನೂ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರು ತುಂಬಾ ಎಚ್ಚರಿಕೆಯಿಂದ ಸಂಚರಿಸಬೇಕಾಗಿದೆ. ರಾತ್ರಿ ವೇಳೆ ಸಂಚರಿಸುವಾಗ ಹೆಚ್ಚಿನ ಜಾಗೃತಿ ವಹಿಸಬೇಕಿದೆ.ಮಳೆ ಹೆಚ್ಚಾದಲ್ಲಿ ಈ ಭಾಗದಲ್ಲಿ ಮತ್ತೆ ಗುಡ್ಡಕುಸಿಯುವ ಸಾಧ್ಯತೆ ಇದೆ. ಈ ಬಗ್ಗೆ ಹೆದ್ದಾರಿ ಕಾಮಗಾರಿಯನ್ನ ನಡೆಸುತ್ತಿರುವ ಗುತ್ತಿಗೆ ಕಂಪನಿ ಜನರ ಸುರಕ್ಷತೆ ಬಗ್ಗೆ ಕಾಳಜಿ ವಹಿಸಬೇಕಿದೆ..
ಸುದ್ದಿಬಿಂದು ಓದುಗರಲ್ಲಿ ವಿನಂತಿ ಇದುವರೆಗೆ ತಾವೇಲ್ಲರೂ ಸುದ್ದಿಬಿಂದು ವೆಬ್ ನ್ಯೂಸ್ನ್ನು ಪ್ರೀತಿಯಿಂದ ಸ್ವೀಕರಿಸಿದ್ದಿರಿ. ಸದ್ಯ Broadcastನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಕಾರಣ ತಾವೇಲ್ಲರೂ ಈ ಲಿಂಕ್ ಮೂಲಕ ಗ್ರೂಪ್ ಸೇರಿಕೊಳ್ಳುವ ಮೂಲಕ ಹಿಂದಿನಂತೆ ಸುದ್ದಿ ಓದು ಬಹುದಾಗಿದೆ ವಾಟ್ಸಾಪ್ ಚಾನಲ್ ಸೇರಿಕೊಳ್ಳಬಹುದು..https://whatsapp.com/channel/0029VaAvVKA47Xe7I9bdgG31https://whatsapp.com/channel/0029VaAvVKA47Xe7I9bdgG31
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




