ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಸದಾಶಿವಗಡದಲ್ಲಿ ಇರುವ ಶ್ರೀದುರ್ಗಾ ಮಾತಾ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ವಿರುದ್ಧ ಭಾರೀ ವಂಚನೆ ಆರೋಪ ಕೇಳಿಬಂದಿದ್ದು, ನೂರಾರು ಗ್ರಾಹಕರು ಕಚೇರಿಯ ಎದುರು ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಸದಾಶಿವಗಡದಲ್ಲಿರುವ ಈ ಸಹಕಾರ ಸಂಘವು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 12 ಶಾಖೆಗಳನ್ನು ಹೊಂದಿದ್ದು, ಗ್ರಾಹಕರು ಆರ್.ಡಿ,ಪಿಗ್ಮಿ ಹಾಗೂ ಎಫ್‌ಡಿ ಖಾತೆಗಳ ಮೂಲಕ ಸೊಸೈಟಿಯಲ್ಲಿ 50 ಕೋಟಿ ರೂ.ಗಿಂತಲೂ ಹೆಚ್ಚಿನ ಹಣವನ್ನು ಜಮೆ ಮಾಡಿದ್ದರು. ಆದರೆ ಕಳೆದ 6ತಿಂಗಳಿನಿಂದ ಸದಾಶಿವಗಡ ಶಾಖೆಯಲ್ಲಿ ಯಾವುದೇ ವಹಿವಾಟು ನಡೆಯುತ್ತಿಲ್ಲ.ಗ್ರಾಹಕರು ಹಣ ವಾಪಸ್ ಕೇಳಿದರೆ ಸಂಘದ ಸಿಬ್ಬಂದಿಯಿಂದ ಸ್ಪಷ್ಟ ಉತ್ತರ ಸಿಗದಿರುವ ಹಿನ್ನೆಲೆಯಲ್ಲಿ ಜನತೆ ಅಸಮಾಧಾನಗೊಂಡಿದ್ದಾರೆ.

ಹಣ ವಾಪಸ್ ನೀಡುವ ಕುರಿತು ಮೇ ತಿಂಗಳಲ್ಲಿ ನಡೆದ ಸಭೆಯಲ್ಲಿ ಜೂನ್ 25 ರಂದು ಹಣ ವಾಪಸ್ ಮಾಡಲಾಗುವು ಎಂದು ಘೋಷಿಸಲಾಗಿತ್ತು.ಆದರೆ ಇದೀಗ ವ್ಯವಸ್ಥಾಪಕ ನಿರ್ದೇಶಕ ಲಿಂಗರಾಜು ಕಲ್ಗುಟ್ಕರ ಅವರು ಕಾಣೆಯಾಗಿದ್ದಾರೆ. ಅವರು ಯಾರಿಗೂ ಸಂಪರ್ಕಕ್ಕೂ ಸಿಗುತ್ತಿಲ್ಲ.

ಈ ಬೆಳವಣಿಗೆಯ ಬಳಿಕ ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿ, ಬಳಿಕ ಚಿತ್ತಾಕುಲ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಸೊಸೈಟಿಯ ಹಗರಣದ ಬಗ್ಗೆ ಶಿರಸಿಯ ಸಹಕಾರ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎನ್ನಲಾಗಿದೆ.ಅಧಿಕಾರಿ ತನಿಖೆ ಮುಗಿಸಿದ ಬಳಿಕ ಅಧಿಕೃತ ದೂರು ನೀಡುವುದಾಗಿ ತಿಳಿಸಿದ್ದಾರೆ. ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ರು ತಿ ಗ್ರಾಹಕರಿಗೆ ಭರವಸೆ ನೀಡಿದೆ.

ಇದನ್ನೂ ಓದಿ : ದಾಂಡೇಲಿಯಲ್ಲಿ ಸರಣಿ ಕಳ್ಳತನ