ಸುದ್ದಿಬಿಂದು ಬ್ಯೂರೋ ವರದಿ
ಸದಾಶಿವಘಡ:ನಗರದ ಸದಾಶಿವಘಡ್ ಪ್ರದೇಶದಲ್ಲಿ ಕೆಲ ಚಿಕನ್ ಹಾಗೂ ಮಟನ್ ಅಂಗಡಿಯವರು ಕೋಳಿ ಹಾಗೂ ಮಾಂಸದ ತ್ಯಾಜ್ಯವನ್ನು ರಸ್ತೆ ಬದಿಗೆ ಎಸೆದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದು. ಇದರಿಂದಾಗಿ ಪರಿಸರ ಮಾಲಿನ್ಯದ ಜೊತೆಗೆ ವಾಗುತ್ತಿದ್ದು, ದುರ್ನಾತ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರ ಬಂದ ಹಿನ್ನಲೆಯಲ್ಲಿ ಚಿತ್ತಾಕುಲ ಪಿಎಸ್ಐ ಮಹಾಂತೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ಎಸೆದ ಶಾಪ್ ಮಾಲೀಕರಿಗೆ ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ.
ಪೊಲೀಸ್ ಇಲಾಖೆಯ ಈ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದ್ದು. ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯುವದು ಕಾನೂನಿಗೆ ವಿರುದ್ಧವಾಗಿದ್ದು, ಇಂತಹ ಅಕ್ರಮಗಳಿಗೆ ಅವಕಾಶ ನೀಡದೆ ಸದಾ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:Shocking news: ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಹೃದಯಾಘಾತದ ಅಪಾಯ!