ಶಿರಸಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ೧೪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಬ್ಲಾಕ್ ಸಮಿತಿ, ಸೆಲ್ ಸಮಿತಿ, ಘಟಕ ಸಮಿತಿ ರಚನೆಯ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿದ ಅವರು, ಯಾವುದೇ ಬ್ಲಾಕ್ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆಗೆ ಅವಕಾಶ ನೀಡಬಾರದು. ಬ್ಲಾಕ್ ಅಧ್ಯಕ್ಷರು ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಂಡು ಒಂದೇ ಕುಟುಂಬದ ರೀತಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ವೋಟ್ ಚೋರಿ ಬಗ್ಗೆ ಮಳೆ -ಚಳಿ – ಬಿಸಿಲು ಅನ್ನದೆ ಹೋರಾಟ ಮಾಡುತಿದ್ದಾರೆ. ನಾವೂ ಅವರ ಕೈ ಬಲ ಪಡಿಸಲು ನಮ್ಮ ಪಕ್ಷದಿಂದ ನೇಮಕರಾದ ಬಿ ಎಲ್ ಎ ಗಳು ಮತದಾರ ಪಟ್ಟಿಯನ್ನು ಸೂಕ್ತವಾಗಿ ಪರಿಶೀಲಿಸಿ ಹೊಸ ಮತದಾರರ ಸೇರ್ಪಡೆ, ಮೃತ ಮತದಾರರ ಹೆಸರು ಮತದಾರರ ಪಟ್ಟಿ ಯಿಂದ ತಗೆದುಹಾಕುವಂತೆ ನೋಡಿಕೊಳ್ಳ ಬೇಕು ಎಂದು ಹೇಳಿದರು.
ಪಕ್ಷದಲ್ಲಿ
ಎರಡು ಮೂರು ಹುದ್ದೆ ಹೊಂದಿರುವವರು ಈ ಕೂಡಲೇ ಒಂದೇ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಬೇರೆ ಹುದ್ದೆಗೆ ರಾಜೀನಾಮೆ ನೀಡಬೇಕು. ಮತ್ತೊಬ್ಬರಿಗೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಜಿಲ್ಲಾ ಕಾಂಗ್ರೆಸ್ ಬದಲಾವಣೆ ಮಾಡಲಿದೆ ಎಂದು ತಿಳಿಸಿದರು.
ಭೂತ್ ಹಂತದ ಏಜೆಂಟ್ ರಚನೆ ಬಗ್ಗೆ ಡಿ ಸಿ ಸಿ ಉಪಾಧ್ಯಕ್ಷ ಶಂಭು ಶೆಟ್ಟಿ ಕಾರ್ಯಾಗಾರ ನಡೆಸಿ, ಬ್ಲಾಕ್ ಅಧ್ಯಕ್ಷರು ಸೂಕ್ತ ಮಾಹಿತಿ ಪಡೆದುಕೊಂಡು ತಮ್ಮ ತಮ್ಮ ಬ್ಲಾಕ್ ವ್ಯಾಪ್ತಿಯಲ್ಲಿ ಕಾರ್ಯಾಗಾರ ನಡೆಸಿ ಕಾರ್ಯಕರ್ತರಿಗೆ ಸೂಕ್ತ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
ಈ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಪ್ರಸನ್ನ ಶೆಟ್ಟಿ, ಶಿರಸಿ ಬ್ಲಾಕ್ ಅಧ್ಯಕ್ಷ ಜಗದೀಶ್ ಗೌಡ, ಸಿದ್ದಾಪುರ ಬ್ಲಾಕ್ ಅಧ್ಯಕ್ಷ ವಸಂತ ನಾಯ್ಕ್, ಹಳಿಯಾಳ ಬ್ಲಾಕ್ ಅಧ್ಯಕ್ಷ ಕೃಷ್ಣ ಪಾಟೀಲ್, ದಾಂಡೇಲಿ ಬ್ಲಾಕ್ ಅಧ್ಯಕ್ಷ ಮೋಹನ್ ಹಲವಾಯಿ, ಜೋಯಿಡಾ ಬ್ಲಾಕ್ ಅಧ್ಯಕ್ಷ ಮಾರುತಿ ಗಾವಡೆ, ಕಾರವಾರ ಬ್ಲಾಕ್ ಅಧ್ಯಕ್ಷ ಅರವಿಂದ ಕಲ್ಗುಟಕರ, ಅಂಕೋಲಾ ಬ್ಲಾಕ್ ಅಧ್ಯಕ್ಷ ಮಂಜೇಶ್ವರ ನಾಯಕ, ಹೊನ್ನಾವರ ಬ್ಲಾಕ್ ಅಧ್ಯಕ್ಷ ಮಹೇಶ ನಾಯ್ಕ್, ಮಂಕಿ ಬ್ಲಾಕ್ ಅಧ್ಯಕ್ಷ ಗೋವಿಂದ ನಾಯ್ಕ್, ಭಟ್ಕಳ್ ಬ್ಲಾಕ್ ಅಧ್ಯಕ್ಷ ವೆಂಕಟೇಶ್ ನಾಯ್ಕ್, ಯಲ್ಲಾಪುರ ಬ್ಲಾಕ್ ಅಧ್ಯಕ್ಷ ವಿ ಎಸ್ ಭಟ್, ಮುಂಡಗೋಡ ಬ್ಲಾಕ್ ಅಧ್ಯಕ್ಷ ಕೃಷ್ಣಾ ಹಿರೇಹಳ್ಳಿ, ಬನವಾಸಿ ಬ್ಲಾಕ್ ಅಧ್ಯಕ್ಷ ಗಣಪತಿ ನಾಯ್ಕ್ ಉಪಸ್ಥಿತರಿದ್ದರು.
ಇದನ್ನೂ ಓದಿ : ಆರ್.ವಿ. ದೇಶಪಾಂಡೆ ವಿವಾದಾತ್ಮಕ ಹೇಳಿಕೆಗೆ ನಾನು ಕ್ಷಮೆ ಕೇಳತ್ತಿನಿ ಎಂದ ಸಚಿವ ಮಂಕಾಳ್ ವೈದ್ಯ



