ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮ೦ಡಿಸಿದ ಬಜೆಟ್ ಜನಸಾಮಾನ್ಯರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡದ್ದಾಗಿದ್ದು, ಪ್ರಧಾನಮ೦ತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಧ್ಯಮ ವರ್ಗ, ಬಡವರು ಸೇರಿದಂತೆ ದೇಶದ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿ ನಿಂತಿದೆ ಎಂದು ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದ್ದಾರೆ.
ಕ್ಯಾನ್ಸರ್ ಸೇರಿದಂತೆ ವಿವಿಧ ಗಂಭೀರ ಕಾಯಿಲೆಗಳ ಔಷಧಿಗಳ ಮೇಲಿನ ತೆರಿಗೆ ಇಳಿಕೆ, ಮೊಬೈಲ್ ಸೇರಿದಂತೆ ಅಗತ್ಯ ವಸ್ತುಗಳ ದರ ಕಡಿತಗೊಳಿಸಿರುವುದು ಶ್ಲಾಘನೀಯ ಕ್ರಮವಾಗಿದೆ ಎಂದು ಅವರು ಪ್ರತಿಕ್ರಿಯಿಸಿದರು. ಇದರಿಂದ ಸಾಮಾನ್ಯ ಜನತೆಗೆ ಆರ್ಥಿಕ ನೆರವು ದೊರಕಲಿದೆ ಎಂದರು. ಮೀನುಗಾರಿಕೆ, ಪಶು ಸಂಗೋಪನೆ, ಗೋಡಂಬಿ ಬೆಳೆ ಹಾಗೂ ತೆಂಗು ಬೆಳೆಗಾರರಿಗೆ ನೀಡಿರುವ ಉತ್ತೇಜನದಿಂದ ಉತ್ತರ ಕನ್ನಡ ಜಿಲ್ಲೆಗೂ ಮಹತ್ವದ ಲಾಭವಾಗಲಿದೆ. ಅಲ್ಲದೆ ‘ಟರ್ಟಲ್ ಟ್ರೇಲ್ಸ್’ ಯೋಜನೆಯ ಮೂಲಕ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ಸಿಗಲಿದ್ದು, ಕರಾವಳಿ ಭಾಗದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ.
ಅತ್ಯುತ್ತಮ ಹಾಗೂ ಜನಪರ ಬಜೆಟ್ ಮಂಡಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.


