ಸುದ್ದಿಬಿಂದು ಬ್ಯೂರೊ ವರದಿ
ಶಿವಮೊಗ್ಗ :ಸಾಗರ ಪಟ್ಟಣದಲ್ಲಿ ನಡೆಯುತ್ತಿರುವ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ಆಗಮಿಸಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು  ಅಸ್ವಸ್ಥಗೊಂಡ ಘಟನೆ ನಡೆದಿದೆ.

ಇದನ್ನೂ ಓದಿ/ಮಟ್ಕಾ ಸಂಘಕ್ಕೆ ಭರ್ಜರಿ ಆದಾಯ : ಮೊದಲ ದಿನವೇ ಯಶಸ್ವಿ ಕಂಡ ‘ಮಂಜ,ದಾಸರ ತಂಡ’

ದೇವಾಲಯದಲ್ಲಿ ಭಾರೀ ಜನಸಂದಣಿ ಇದ್ದ ಸಮಯದಲ್ಲಿ ಅವರಿಗೆ ಏಕಾಏಕಿ ತಲೆಸುತ್ತು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗಿದೆ.
ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಆತಂಕಪಡುವ ಅಗತ್ಯ ಇಲ್ಲವೆಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಜನಸಂದಣಿ ಹಾಗೂ ಉಸಿರಾಟದ ತೊಂದರೆ ಕಾರಣವಾಗಿರಬಹುದು ಎನ್ನಲಾಗಿದೆ..