ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಜ್ಯೋತಿಷಿ ಕಮಲಾಕರ ಭಟ್ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪದಡಿ ವಸಂತ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ‘ರೀಲ್ಸ್ ರಾಣಿ’ ಸುಚಿತ್ರಾ, ರಾಜ್ಯದ ವಿವಿಧ ಜಿಲ್ಲೆಗಳ ಅನೇಕ ಯುವಕರೊಂದಿಗೆ ಸಂಪರ್ಕ ಹೊಂದಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಈ ಪ್ರಕರಣ ರಾಜ್ಯವನ್ನ ಬೆಚ್ಚಿಬಿಳಿಸುವಂತೆ ಮಾಡಿದೆ.
ಆಸ್ತಿ ಮತ್ತು ಅಂತಸ್ತಿನ ಆಮಿಷಕ್ಕಾಗಿ ಕಮಲಾಕರ ಭಟ್ ಜೊತೆ ಸುಚಿತ್ರಾ ಸಂಪರ್ಕ ಬೆಳೆಸಿಕೊಂಡಿದ್ದಳು. ಬಾಗಲಕೋಟೆ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳ ಯುವಕರೊಂದಿಗೆ ಆಕೆ ನಿರಂತರ ಸಂಪರ್ಕದಲ್ಲಿದ್ದಳು ಎನ್ನುವ ಮಾಹಿತಿ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ ಎನ್ನಲಾಗಿದೆ.
ರೀಲ್ಸ್ ಮಾಡುವ ಮೂಲಕ ಯುವಕರನ್ನು ಆಕರ್ಷಿಸುತ್ತಿದ್ದ ಸುಚಿತ್ರಾ,ಹಲವರೊಂದಿಗೆ ಚಾಟಿಂಗ್ ಹಾಗೂ ದೂರವಾಣಿ ಸಂಭಾಷಣೆಯಲ್ಲಿ ತೊಡಗಿಸಿಕೊಂಡಿದ್ದಳು ಎನ್ನಲಾಗಿದೆ. ಒಬ್ಬ–ಎರಡು ಯುವಕರು ಆಕೆಗೆ ಸಾಕಾಗಿರಲಿಲ್ಲ ಎಂಬಂತೆ, ನಿತ್ಯವೂ ಹತ್ತು–ಹದಿನೈದು ಮಂದಿಯೊಂದಿಗೆ ಸಂಪರ್ಕದಲ್ಲಿದ್ದಳು ಎಂಬ ಅಂಶಗಳು ಪೊಲೀಸರು ಮೊಬೈಲ್ ಹಾಗೂ ಡಿಜಿಟಲ್ ಮಾಹಿತಿಯ ಪರಿಶೀಲನೆ ವೇಳೆ ಪತ್ತೆಯಾಗಿದೆ ಎನ್ನಲಾಗಿದೆ.
ಈ ಪ್ರಕರಣದ ಆಂತರಿಕ ವಿಚಾರಗಳು ಹೊರಬರುತ್ತಿದ್ದಂತೆ, ಸುಚಿತ್ರಾ ಸಂಪರ್ಕದಲ್ಲಿದ್ದವರಲ್ಲಿ ಆತಂಕ ಹೆಚ್ಚಾಗಿದೆ ಎನ್ನಲಾಗಿದೆ. ಸಿದ್ದಾಪುರದ ಈ ಕೊಲೆ ಪ್ರಕರಣದ ರಹಸ್ಯಗಳು ಒಂದೊಂದಾಗಿ ಬಹಿರಂಗವಾಗುತ್ತಿದ್ದು, ‘ರೀಲ್ಸ್ ರಾಣಿ’ಯ ನಿಜ ಸ್ವರೂಪ ಹೊರಬರುತ್ತಿದೆ. ಬಣ್ಣದ ಲೋಕದ ಆಕರ್ಷಣೆಗೆ ಒಳಗಾಗುವ ಮೊದಲು ಯುವಕರು ಎಚ್ಚರಿಕೆಯಿಂದ ನಡೆದುಕೊಳ್ಳಬೇಕಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
ಇದನ್ನೂ ಓದಿ/ಜೆಡಿಎಸ್ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿ ಸೂರಜ್ ನಾಯ್ಕ ಸೋನಿ ನೇಮಕ


