ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ನಾಳೆ ಹಾವೇರಿಯಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಉತ್ತರಕನ್ನಡ ಜಿಲ್ಲೆಯಿಂದ ಸಾವಿರಾರು ಜನರನ್ನ ಹಾವೇರಿ ಕರೆದುಕೊಂಡು ಹೋಗಲಾಗುತ್ತಿದ್ದು ಒಪ್ಪಂದದ ಮೇರೆಗೆ ವಿಶೇಷ ಬಸ್ ಸೇವೆ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ ಅಮ್ಮನವರ್ ತಿಳಿಸಿದ್ದಾರೆ.
ಇದರಿಂದಾಗಿ ಜಿಲ್ಲೆಯಿಂದ ನೂರಾರು ಬಸ್ಗಳನ್ನ ಹಾವೇರಿಗೆ ಬಿಡಲಾಗುತ್ತಿದ್ದು, ಪ್ರಯಾಣಿಕರ ಓಡಾಟಕ್ಕೆ ಸಮಸ್ಯೆ ಎದುರಾಗಿಲಿದೆ. ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ಗ್ರಾಮೀಣ ಭಾಗಗಳಿಂದ ಭಾಗವಹಿಸುವವರನ್ನು ಸಾಗಿಸಲು ಸಾರಿಗೆ ಬಸ್ಗಳನ್ನು ನಿಯೋಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ದೂರದ ಊರುಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳ ನಿಯಮಿತ ಬಸ್ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಸಾರ್ವಜನಿಕರು ಈ ಕುರಿತು ಸಹಕರಿಸಬೇಕೆಂದು ಹಾಗೂ ಅಗತ್ಯ ಪ್ರಯಾಣಗಳನ್ನು ಮುಂಚಿತವಾಗಿ ಯೋಜಿಸಿಕೊಳ್ಳಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಕಾರ್ಯಕ್ರಮದ ಅವಧಿಯಲ್ಲಿ ಮಾತ್ರ ಈ ವ್ಯವಸ್ಥೆ ಜಾರಿಯಲ್ಲಿದ್ದು, ನಂತರ ನಿಯಮಿತ ಬಸ್ ಸಂಚಾರ ಪುನರಾರಂಭಗೊಳ್ಳಲಿದೆ ಎಂದು ತಿಳಿಸಲಾಗಿದೆ.


