ಗ್ರಾಮೀಣ ಪ್ರದೇಶಗಳಲ್ಲಿ ರೈತರ ಜೀವನ ಶೈಲಿ, ಆದಾಯದ ಅನಿಶ್ಚಿತತೆ ಸೇರಿದಂತೆ ಹಲವು ಕಾರಣಗಳಿಂದ ಮಹಿಳೆಯರು ರೈತರನ್ನು ಮದುವೆಯಾಗಲು ಹಿಂಜರಿಯುತ್ತಿರುವುದು ಗಮನಾರ್ಹವಾಗಿದೆ. ಇದರ ಪರಿಣಾಮವಾಗಿ ಕೃಷಿಯಲ್ಲಿ ತೊಡಗಿರುವ ಅನೇಕ ಯುವಕರು ಮದುವೆಯಾಗದೆ ಉಳಿಯುತ್ತಿದ್ದಾರೆ ಎಂದು ಶಾಸಕರು ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಈ ಹಿನ್ನೆಲೆ, ರೈತ ಸಮುದಾಯದ ಸಾಮಾಜಿಕ ಭದ್ರತೆ ಹಾಗೂ ಗ್ರಾಮೀಣ ಜೀವನ ಶೈಲಿಗೆ ಉತ್ತೇಜನ ನೀಡುವ ಉದ್ದೇಶದಿಂದ, ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಸರ್ಕಾರದಿಂದ ವಿಶೇಷ ಪ್ರೋತ್ಸಾಹ ಧನ ಅಥವಾ ಪ್ರೋತ್ಸಾಹ ಪ್ಯಾಕೇಜ್ ಘೋಷಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದೇ ವಿಷಯವನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಪರಿಗಣಿಸಿ, ರೈತ ಕುಟುಂಬಗಳಿಗೆ ಆಶಾಕಿರಣವಾಗುವಂತಹ ಹೊಸ ಯೋಜನೆ ಪ್ರಕಟಿಸುವಂತೆ ಶಾಸಕ ಡಾ. ರಂಗನಾಥ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ/Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ