ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ಶಿರಸಿ ಸೇರಿದಂತೆ ಕೆಲ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಉರಿಯುತ್ತಿದ್ದ ಬೇಸಿಗೆಯ ತೀವ್ರ ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಈ ಮಳೆ ತುಸು ಉಸಿರು ಬಿಡುವಂತಾಗಿದೆ.
ಮಧ್ಯಾಹ್ನದಿಂದಲೇ ಆಕಾಶದಲ್ಲಿ ದಟ್ಟವಾದ ಮೋಡಗಳು ಕವಿದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ ಹೊತ್ತಿಗೆ ಗುಡುಗು–ಮಿಂಚು ಸಹಿತ ಮಳೆ ಸುರಿಯಿತು. ಇದರಿಂದ ಕೆಲಕಾಲ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಲ್ಪ ಮಟ್ಟಿನ ಅಡಚಣೆ ಉಂಟಾಯಿತು.
ಉತ್ತರ ಕನ್ನಡ ಜಿಲ್ಲೆಯ ಉಳಿದ ಭಾಗಗಳಲ್ಲಿಯೂ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಯಾವುದೇ ಸಮಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ/ಮಾರಿಕಾಂಬ ದೇವಿ ಜಾತ್ರೆ ಹೆಸರಿನಲ್ಲಿ AI ನಕಲಿ ಜಾಹೀರಾತು: ಭಕ್ತರಿಗೆ ಪೊಲೀಸ್ ಎಚ್ಚರಿಕೆ





