ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ತಾಲೂಕಿನ ಕೆಳಗಿನ ಮಖೇರಿಯ ಶೆಜವಾಡದಲ್ಲಿರುವ ನವದುರ್ಗಾ ಗಿಂಡಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದಿದ್ದು, ಅಪರಿಚಿತರು ದೇವಸ್ಥಾನದ ಬೀಗವನ್ನು ಒಡೆದು ಒಳನುಗ್ಗಿ ದೇವಿಯ ಮೂರ್ತಿಯ ಮೇಲಿದ್ದ ಚಿನ್ನ–ಬೆಳ್ಳಿ ಆಭರಣಗಳನ್ನು ಕದ್ದೊಯ್ದಿದ್ದಾರೆ.
ದೇವಿಯ ಕುತ್ತಿಗೆಯಲ್ಲಿದ್ದ ಸುಮಾರು 10 ಗ್ರಾಂ ತೂಕದ ಬೆಳ್ಳಿ ಸರ ಹಾಗೂ ಒಂದೊಂದು ಗ್ರಾಂ ತೂಕದ ಬಂಗಾರದ ಲಾಕೇಟ್ ಹೊಂದಿದ್ದ ಎರಡು ಕರಿಮಣಿ ಮಾಂಗಲ್ಯಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಸ್ಥಳೀಯ ನಿವಾಸಿ ಮಹೇಂದ್ರ ಕುಶಾಲಿ ಬಾಂದೇಕರ್ ಅವರು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದೆ.
ಈ ಹಿಂದೆಯೂ ಅಮದಳ್ಳಿ ಗಣಪತಿ ದೇವಸ್ಥಾನ ಹಾಗೂ ಕಾರವಾರದ ಸಾಯಿ ಮಂದಿರಗಳಲ್ಲಿ ಕಳ್ಳತನ ನಡೆದಿತ್ತು.
ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಶೀಘ್ರವಾಗಿ ಆರೋಪಿಗಳನ್ನು ಬಂಧಿಸಬೇಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಾತ್ರಿ ಪೊಲೀಸ್ ಪೆಟ್ರೋಲಿಂಗ್ ಹೆಚ್ಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ/ಕೈಗಾ ಯೋಜನೆಯಲ್ಲಿ ಸ್ಥಳೀಯರಿಗೆ ಉದ್ಯೋಗ, ಸೌಲಭ್ಯ ಕಲ್ಪಿಸುವಂತೆ ರೂಪಾಲಿ ಎಸ್.ನಾಯ್ಕ ಆಗ್ರಹ


