ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿರುವ ಪ್ರಸಿದ್ಧ ವೀರಾಂಜನೇಯ ಮಹಾಸಂಸ್ಥಾನಕ್ಕೆ ಖ್ಯಾತ ಭಾರತೀಯ ಕ್ರಿಕೆಟಿಗ ಕೆ.ಎಲ್. ರಾಹುಲ್ ಅವರ ಭೇಟಿ ನೀಡಿದರು.
ಆಂಜನೇಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ರಾಹುಲ್, ದೇವರ ಅನುಗ್ರಹವನ್ನು ಪಡೆದರು. ಈ ಸಂದರ್ಭದಲ್ಲಿ ಆಂಜನೇಯ ಸಂಸ್ಥಾನದ ಮಾರುತಿ ಗುರುಜಿ ಅವರು ರಾಹುಲ್ ಅವರಿಗೆ ಆಶೀರ್ವಚನ ನೀಡಿದರು.
ನಂತರ ಆಡಳಿತ ಮಂಡಳಿಯಿಂದ ರಾಹುಲ್ ಅವರಿಗೆ ಸತ್ಕಾರ ನಡೆಸಿ, ಗೌರವ ಸಲ್ಲಿಸಲಾಯಿತು. ಈ ವೇಳೆ ಭಕ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಕ್ರಿಕೆಟಿಗನನ್ನು ಕಣ್ತುಂಬಿಕೊಂಡು ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ/ಇನೋವಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಕಲ್ಬುರ್ಗಿಯಿಂದ ಪ್ರವಾಸಕ್ಕೆ ಬಂದ ವೇಳೆ ಘಟನೆ

