ಸುದ್ದಿಬಿಂದು ಬ್ಯೂರೋ ವರದಿ
ಬಳ್ಳಾರಿ:  ಜಿಲ್ಲೆಯ ಗುರುಕುಲ ಶಾಲೆಯ ಹಾಸ್ಟೆಲ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ದುರಂತಕ್ಕೆ ತಿರುಗಿದ ಘಟನೆಯಲ್ಲಿ ಓರ್ವ ವಿದ್ಯಾರ್ಥಿ 9ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಆಂದ್ರದ ಹೇಮಂತ್‌ ಎಂಬಾತ ಸಾವನ್ನಪ್ಪಿದ್ದಾನೆ.ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕಬ್ಬಿಣದ ರಾಡ್‌ನಿಂದ ಸಹಪಾಠಿಗಳ ಮೇಲೆ ಹಲ್ಲೆ ನಡೆಸಿದ್ದಾನೆ.ಹಾಸ್ಟೆಲ್‌ನಲ್ಲಿ ನಡೆದ ವಾಗ್ವಾದವು ತೀವ್ರಗೊಂಡು, ಒಂಬತ್ತನೇ ತರಗತಿಯ ವಿದ್ಯಾರ್ಥಿ ಕಬ್ಬಿಣದ ರಾಡ್ ಹಿಡಿದು ಮನಸೋ ಇಚ್ಛೆ ಇತರ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಹಲ್ಲೆಯ ವೇಳೆ ರಾಡ್ ಪೆಟ್ಟು ಬಿದ್ದ ಪರಿಣಾಮ ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಸಾವನ್ನಪ್ಪಿದ್ದಾನೆ.

ಈ ವೇಳೆ ಗಲಾಟೆಯನ್ನು ತಡೆಯಲು ಬಂದ ಹಾಸ್ಟೆಲ್ ವಾರ್ಡನ್ ಮೇಲೆಯೂ ಆರೋಪಿತ ವಿದ್ಯಾರ್ಥಿ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ. ಘಟನೆಯ ನಂತರ ವಿದ್ಯಾರ್ಥಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಹಲ್ಲೆ ನಡೆಸಿದ ವಿದ್ಯಾರ್ಥಿ ಪಾರಾಗಿದ್ದಾನೆ.

ಈ ಘಟನೆ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ವಿದ್ಯಾರ್ಥಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ..

ಇದನ್ನೂ ಓದಿ/ ನಿರಾಶ್ರಿತರಿಗೆ ಪರಿಹಾರ, ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ಹಣ ಬಿಡುಗಡೆ ಸ್ವಾಗತಾರ್ಹ: ರೂಪಾಲಿ ನಾಯ್ಕ