ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮುಂಡಗೋಡು ತಾಲೂಕಿನ ಕಲಕೋಪ್ಪ ಕ್ರಾಸ್ ಸಮೀಪ ನಡೆದಿದೆ.

ಅಪಘಾತದಲ್ಲಿ ಹಾನಗಲ್ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದ ಎಲ್ಲಪ್ಪ ಎಸ್. ಕೊಡದ್ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಇದ್ದ ಸಹಸವಾರ ವಿಟ್ಟಲ್ ಎಸ್. ಚೋಳಪ್ಪನವರ್ ಗಂಭೀರವಾಗಿ ಗಾಯಗೊಂಡಿದ್ದು, ಅತನಿಗೆ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಇಬ್ಬರೂ ಹಾನಗಲ್ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದವರಾಗಿದ್ದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಟಿಪ್ಪರ್ ಡಿಕ್ಕಿ ಸಂಭವಿಸಿ ದುರ್ಘಟನೆ ನಡೆದಿದೆ..

ಹುಬ್ಬಳ್ಳಿ–ಶಿರಸಿ ಹೆದ್ದಾರಿಯಲ್ಲಿ ಟಿಪ್ಪರ್ ಸಂಚಾರ ಹೆಚ್ಚಾಗಿದ್ದು, ಹಗಲು–ರಾತ್ರಿ ಎನ್ನದೆ ವೇಗವಾಗಿ ಓಡಾಟ ನಡೆಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ವಿಶೇಷವಾಗಿ ಹಾನಗಲ್ ಭಾಗದ ಕಲ್ಲು ಗಣಿಗಾರಿಕೆಯಿಂದ ಜೆಲ್ಲಿ ತುಂಬಿಕೊಂಡು ಪಾಳಾ ಮಾರ್ಗವಾಗಿ ಶಿರಸಿಯತ್ತ ತೆರಳುವ ಟಿಪ್ಪರ್ ವಾಹನಗಳ ಹಾವಳಿ ಈ ಮಾರ್ಗದಲ್ಲಿ ಹೆಚ್ಚಾಗಿ ಓಡಾಡುತ್ತಿರುವುದು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಮುಂಡಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ/ಬೈಕ್–ಕಾರು ಅಪಘಾತ: ಸಹೋದರರಿಬ್ಬರೂ ಗಂಭೀರ ಗಾಯ