ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ನಗರದ ಬಾಂಡಿಶಿಟಾ ಸಮೀಪ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕಾರ ಸಂಪೂರ್ಣವಾಗಿ ಸುಟ್ಟುಕರಕಲಾಗಿರುವ ಘಟನೆ ನಡೆದ್ದು, ಕಾರ‌ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜೀವನ್ ಪವಾರ್ ಎಂಬುವವರಿಗೆ ಸೇರಿದ ಕಾರು ಎಂದು ತಿಳಿದು ಬಂದಿದ್ದು, ಕಾರವಾರ ಕಡೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ಹೊತ್ತಿಕೊಂಡಿದೆ ಬೆಂಕಿ ಗಮನಿಸಿದ ತಕ್ಷಣ ಕಾರು ನಿಲ್ಲಿಸಿ ಹೊರಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಕಾರಿಗೆ ಬೆಂಕಿ ತಗುಲಿರುವುದನ್ನ ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ‌ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ/ಪ್ರಧಾನಿ ನರೇಂದ್ರ ಮೋದಿಗೆ ಪೋನ್ ಮಾಡಿದ ಟ್ರಂಪ್