ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದ ಕಾಂಗ್ರೆಸ್ ಮುಖಂಡ ಗೋಪಾಲ ನಾಯಕ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು ಇದೀಗ ವೈರಲ್ ಆಗಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಆಪ್ತರಾಗಿರುವ ಹಾಗೂ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಗೋಪಾಲ ನಾಯಕ ಮೇಲೆ ಆರು ಜನರ ಗುಂಪು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಆ ವಿಡಿಯೋ ಇದೀಗ   ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಗೋವಾ ಮೂಲದ ಸುಪಾರಿ ಹಂತಕರಿಂದಲೇ ಈ ದಾಳಿ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹತ್ಯೆ ಮಾಡಬೇಕು ಎನ್ನುವ ಉದ್ದೇಶದಿಂದಲ್ಲೇ‌‌‌ ಹಂತಕರು ಬಂದಿದ್ದರು.‌ ಆದರೆ ಗೋಪಾಲಕೃಷ್ಣ ನಾಯಕ ಅವರ ಅದೃಷ್ಟ ಗಟ್ಟಿಯಾಗಿರೋದ್ರಿಂದ ಪ್ರಾಣಾಪಾಯಿಂದ‌ ಪಾರಾಗಿದ್ದಾರೆ..ಗಂಭೀರವಾಗಿ ಗಾಯಗೊಂಡಿರುವ ಗೋಪಾಲ ನಾಯಕ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕೃತ್ಯಕ್ಕೆ ಸುಫಾರಿ ಕೊಟ್ಟವರರು ಯಾರು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ..

ಇದನ್ನೂ ಓದಿ/ಗೋಪಾಲಕೃಷ್ಣ ನಾಯಕ ಹತ್ಯೆ ಸಂಚು ರೂಪಿದ ಗ್ಯಾಂಗ್‌ನ ಪೊಟೋ ವೈರಲ್!