ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ: ಬೈಕ್ ಅಪಘಾತದ ಹಿನ್ನೆಲೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ,ಇಬ್ಬರಿಗೆ ಚಾಕು ಇರಿತವಾಗಿರುವ ಘಟನೆ ಭಟ್ಕಳ ತಾಲೂಕಿನ ಜಾಲಿಯ ದೇವಿ ನಗರದಲ್ಲಿ ನಡೆದಿದೆ.
ಗಲಾಟೆಯ ವೇಳೆ ರಂಗಿನ ಕಟ್ಟೆ ನಿವಾಸಿಗಳಾದ ತೌಸಿಫ್ ಕತೀಬ್ ಹಾಗೂ ಜುಪಾಪ್ ಅರ್ಮರ್ ಎಂಬವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ.
ಬೈಕ್ ಅಪಘಾತದಿಂದ ಉಂಟಾದ ವಾಗ್ವಾದವೇ ಈ ಹಲ್ಲೆಗೆ ಕಾರಣವಾಗಿದ್ದು, ಬಳಿಕ ಇದು ಎರಡು ಗುಂಪುಗಳ ನಡುವೆ ಹೊಡೆದಾಟಕ್ಕೆ ಕಾರಣವಾಗಿದೆ. ಈ ವೇಳೆ ಬ್ಯಾರಿ ಸಮುದಾಯಕ್ಕೆ ಸೇರಿದ ಕೆಲ ಯುವಕರ ಗುಂಪು ಚಾಕು ಇರಿದು ಪರಾರಿಯಾಗಿದ್ದಾರೆನ್ನಲಾಗಿದೆ..
ಘಟನೆ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಮುಂದೆ ಸ್ಥಳೀಯ ಮುಸ್ಲಿಂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಡಿವೈಎಸ್ಪಿ ಗಿರೀಶ್ ಹಾಗೂ ಸಿಪಿಐ ದಿವಾಕರ್ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆ ಸಂಬಂಧ ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಇದನ್ನೂ ಓದಿ/ಗೋಪಾಲಕೃಷ್ಣ ಹತ್ಯೆ ಯತ್ನದ ಹಿಂದೆ ‘ಸುಪಾರಿ’ ಶಂಕೆ ಎಸ್ಪಿ : ತನಿಖೆ ಇನ್ನಷ್ಟು ಚುರುಕು..!

