ಸುದ್ದಿಬಿಂದು ಬ್ಯೂರೋ ವರದಿ
ಮೈಸೂರ : ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆ ಹಾಗೂ ಮುಖ್ಯಮಂತ್ರಿ ಸ್ಥಾನ ಕುರಿತಾಗಿ ಕೇಳಿಬರುತ್ತಿರುವ ಚರ್ಚೆಗೆ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ‌ ಕುರಿತು ಮೈಸೂರಿನಲ್ಲಿ ಮಾಧ್ಯಗಳಿಗೆ ಹೇಳಿಕೆ ನೀಡಿದ ಸಿಎಂ ಉಪಚುನಾವಣೆಗಳ ಫಲಿತಾಂಶ ಮತ್ತು ಸಿಎಂ ಸ್ಥಾನದಲ್ಲಿ ಎದ್ದಿರುವ ಗೊಂದಲಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು. ಪಕ್ಷದ ಹೈಕಮಾಂಡ್ ಅನುಮತಿ ನೀಡಿದಲ್ಲಿ ಮುಂದಿನ ಎರಡು ವರ್ಷಗಳ ಕಾಲವೂ ತಾವೇ ಬಜೆಟ್ ಮಂಡಿಸುವುದಾಗಿ ತಿಳಿಸಿದರು. “ಹೈಕಮಾಂಡ್ ಸೂಚನೆಯಂತೆ ನಾವು ನಡೆಯುತ್ತೇವೆ. ಸಿಎಂ ಸ್ಥಾನ ವಿಚಾರಕ್ಕೆ ಚುನಾವಣೆಗಳ ಜೊತೆ ಯಾವುದೇ ಸಂಬಂಧ ಇಲ್ಲ,” ಎಂದು ಹೇಳಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸ
ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಸೋಮವಾರದಿಂದಲೇ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದು, ಬಳಿಕ ಏಪ್ರಿಲ್ 5ರಂದು ಕೇರಳ ರಾಜ್ಯದಲ್ಲಿ ನಡೆಯುವ ಚುನಾವಣಾ ಪ್ರಚಾರಕ್ಕೂ ತೆರಳುವುದಾಗಿ ತಿಳಿಸಿದರು.ಹಿಂದಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದನ್ನು ಉಲ್ಲೇಖಿಸಿದರು, ದಾವಣಗೆರೆಯಲ್ಲಿ ಯಾವುದೇ ಗೊಂದಲ ಇಲ್ಲ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ/ಇಂದಿನ ಷೇರು ಮಾರುಕಟ್ಟೆಯಲ್ಲಿ ಮಿಶ್ರ ಧೋರಣೆ: ಬ್ಯಾಂಕಿಂಗ್ ಏರಿಕೆ, ಐಟಿ ಕುಸಿತ