ಸುದ್ದಿಬಿಂದು ಬ್ಯೂರೋ ವರದಿ
ಮೈಸೂರ : ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆ ಹಾಗೂ ಮುಖ್ಯಮಂತ್ರಿ ಸ್ಥಾನ ಕುರಿತಾಗಿ ಕೇಳಿಬರುತ್ತಿರುವ ಚರ್ಚೆಗೆ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಗಳಿಗೆ ಹೇಳಿಕೆ ನೀಡಿದ ಸಿಎಂ ಉಪಚುನಾವಣೆಗಳ ಫಲಿತಾಂಶ ಮತ್ತು ಸಿಎಂ ಸ್ಥಾನದಲ್ಲಿ ಎದ್ದಿರುವ ಗೊಂದಲಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು. ಪಕ್ಷದ ಹೈಕಮಾಂಡ್ ಅನುಮತಿ ನೀಡಿದಲ್ಲಿ ಮುಂದಿನ ಎರಡು ವರ್ಷಗಳ ಕಾಲವೂ ತಾವೇ ಬಜೆಟ್ ಮಂಡಿಸುವುದಾಗಿ ತಿಳಿಸಿದರು. “ಹೈಕಮಾಂಡ್ ಸೂಚನೆಯಂತೆ ನಾವು ನಡೆಯುತ್ತೇವೆ. ಸಿಎಂ ಸ್ಥಾನ ವಿಚಾರಕ್ಕೆ ಚುನಾವಣೆಗಳ ಜೊತೆ ಯಾವುದೇ ಸಂಬಂಧ ಇಲ್ಲ,” ಎಂದು ಹೇಳಿದರು.



