ಸುದ್ದಿಬಿಂದು ಬ್ಯೂರೋ ವರದಿ
ಹಾವೇರಿ: ನಗರ ಬಸ್ ನಿಲ್ದಾಣದಲ್ಲಿ ಬುಧವಾರ ಆತಂಕಕಾರಿ ಘಟನೆ ಸಂಭವಿಸಿದ್ದು, NWKSRTC ಬಸ್ ನಿಯಂತ್ರಣ ತಪ್ಪಿ ಕಾರಿಡಾರ್ ಒಳಗೆ ನುಗ್ಗಿ ನಿಂತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡೆದ ಪರಿಣಾಮ 2 ವರ್ಷದ ಮಗು ಸೇರಿದಂತೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದ ಎರಡು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು (Karnataka Bus Accident Today)

ಲಕ್ಷ್ಮೇಶ್ವರ ಕಡೆಗೆ ತೆರಳುತ್ತಿದ್ದ ಬಸ್ ಅತಿ ವೇಗದಲ್ಲಿ ನಿಲ್ದಾಣಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. (Haveri Bus Stand Accident) ಬಸ್ ನಿಲ್ದಾಣದ ಬೇಕರಿ ಸಮೀಪದಲ್ಲಿ ನಿಂತಿದ್ದ ಪ್ರಯಾಣಿಕರ ಮೇಲೆ ಬಸ್ ಹರಿದುಬಂದಿದ್ದು, ಜನರಲ್ಲಿ ಭೀತಿ ಉಂಟಾಗಿತ್ತು.

ಗಾಯಗೊಂಡ ಮಹಿಳೆ ಹಾಗೂ ಮಗು ತಕ್ಷಣ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ‌ಮಗು ಸಾವನ್ನಪ್ಪಿದ್ದಾಳೆ.(Emergency Medical Services India) ಘಟನೆಯಿಂದಾಗಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆಯ ನಂತರ ಚಾಲಕ ಮತ್ತು ಕಂಡಕ್ಟರ್ ವಿರುದ್ಧ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಹಿಡಿಶಾಪ ಹಾಕಿದ್ದಾರೆ. ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದು, ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಈ ಸಂಬಂಧ ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. (Insurance claim after bus accident)

ಇದನ್ನೂ ಓದಿ/Kumta/ಕುಮಟಾದಲ್ಲಿ LPG ಸಂಕಷ್ಟ: ರಿಕ್ಷಾ ಚಾಲಕರ ಪರದಾಟ,ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ