ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ತಾಲೂಕಿನ ವಿವಿಧ ಭಾಗಗಳಲ್ಲಿ ಅನಧಿಕೃತ ಮದ್ಯದ ಅಂಗಡಿಗಳು ಹಾಗೂ ಗಾಂಜಾ ಮಾರಾಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ Illegal Liquor Crackdown ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಯಲ್ಲಾಪುರ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಮಹೇಶ್ ಕೃಷ್ಣ ನಾಯ್ಕ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಕಿರವತ್ತಿ, ಗುಳ್ಳಾಪುರ, ಮಂಚಿಕೇರಿ, ಮುಂಡಗೋಡ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಯಾವುದೇ ಕಾನೂನು ನಿಯಮಗಳನ್ನು ಪಾಲಿಸದೆ Excise Dept Action ಅನಧಿಕೃತ ಮದ್ಯದ ಅಂಗಡಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಅಂಗಡಿಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೂ ಸಹ ಮದ್ಯ ಸುಲಭವಾಗಿ ಲಭ್ಯವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಇದರ ಜೊತೆಗೆ, ಈ ಪ್ರದೇಶಗಳಲ್ಲಿ ಗಾಂಜಾ ಮಾರಾಟವೂ ಹೆಚ್ಚಾಗಿದ್ದು, Drug Abuse Warning ಯುವಕರು ಹಾಗೂ ವಿದ್ಯಾರ್ಥಿಗಳು ನಶೆಗೆ ಒಳಗಾಗಿ ಸಾಮಾಜಿಕ ಅಶಾಂತಿ, ಗಲಾಟೆಗಳು ಮತ್ತು ಅಪರಾಧ ಚಟುವಟಿಕೆಗಳಲ್ಲಿ ತೊಡಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅಬಕಾರಿ ಇಲಾಖೆಗೆ ಮಾಹಿತಿ ಇದ್ದರೂ Strict Law Enforcement ಗಂಭೀರ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದ ಅವರು, ಅಬಕಾರಿ ಇಲಾಖೆಯ ಮುಖ್ಯ ಕರ್ತವ್ಯವೇ ಇಂತಹ ಅನಧಿಕೃತ ಚಟುವಟಿಕೆಗಳನ್ನು ತಡೆಹಿಡಿಯುವುದಾಗಿದೆ ಎಂದು ನೆನಪಿಸಿದ್ದಾರೆ.
ತಕ್ಷಣದಲ್ಲಿ ಅನಧಿಕೃತ ಮದ್ಯದ ಅಂಗಡಿಗಳನ್ನು ಶಾಶ್ವತವಾಗಿ ಮುಚ್ಚುವಂತಾಗಬೇಕು, Minor Safety Alert ಗಾಂಜಾ ಮಾರಾಟದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಅಪ್ರಾಪ್ತರಿಗೆ ಮದ್ಯ ಮಾರಾಟ ಸಂಪೂರ್ಣ ನಿಲ್ಲಿಸಬೇಕು ಹಾಗೂ ನಿಯಮಿತ ಪರಿಶೀಲನೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಮಸ್ಯೆಗೆ ತಕ್ಷಣ ಸ್ಪಂದನೆ ದೊರಕದಿದ್ದಲ್ಲಿ Public Protest Warning ಸಾರ್ವಜನಿಕರು ಒಟ್ಟಾಗಿ ಪ್ರತಿಭಟನೆ, ಮುಷ್ಕರ ಹಾಗೂ ಹೆದ್ದಾರಿ ಬಂದ್ ನಡೆಸುವ ಅಗತ್ಯ ಎದುರಾಗಬಹುದು ಎಂದು ಎಚ್ಚರಿಸಿದ್ದಾರೆ.
ಸಾರ್ವಜನಿಕರ ತೆರಿಗೆ ಹಣದಿಂದ ಸಂಬಳ ಪಡೆಯುವ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಿ Urgent Govt Response ಕಾನೂನು ಪ್ರಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಹೇಶ್ ನಾಯ್ಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ/ Gas/ಗ್ಯಾಸ್ ಕೊರತೆ: ಆಟೋಗಳಿಗೆ ಪೆಟ್ರೋಲ್ ಬಳಕೆ ಕೇಂದ್ರದಿಂದ ಸೂಚನೆ..!

