ಭಟ್ಕಳ: ಜಾನುವಾರುಗಳ ಅಕ್ರಮ ಸಾಗಾಟ ಮತ್ತು ಕ್ರೌರ್ಯದ ವಿರುದ್ಧ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಒಟ್ಟು 10ಒಂಟಿಯನ್ನ ರಕ್ಷಿಸಿದ್ದು, ಮೂವರನ್ನ ವಶಕ್ಕೆ ಪಡೆಯಲಾಗಿದೆ.

ಏಪ್ರಿಲ್ 21ರಂದು ಬೆಳಿಗ್ಗೆ ಭಟ್ಕಳ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಮಹಾರಾಷ್ಟ್ರ ನೋಂದಣಿ ಲಾರಿಯೊಂದನ್ನು ತಡೆದು ತಪಾಸಣೆ ನಡೆಸಿದಾಗ, ಸುಮಾರು 3.75 ಲಕ್ಷ ರೂಪಾಯಿ ಮೌಲ್ಯದ 8 ಒಂಟೆಗಳನ್ನು ಅಮಾನುಷವಾಗಿ ಕಟ್ಟಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಈ ಸಂಬಂಧ ಲಾರಿಯಲ್ಲಿದ್ದ ಕರಣ ಬಾಬರ, ಸುಹಾಸ ಸೂರ್ಯವಂಶಿ ಮತ್ತು ಯಶ ಗೋಟಕಿಂಡೆ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತ್ಯೇಕ ಪ್ರಕರಣ : ಭಟ್ಕಳ ನಗರದ ಬಂದರ ರೋಡ್ ಪ್ರದೇಶದಲ್ಲಿ ದಾಳಿ ನಡೆಸಿದ ಪೊಲೀಸರು ವಧೆಗಾಗಿ ಕೂಡಿಹಾಕಿದ್ದ 2 ಲಕ್ಷ ರೂಪಾಯಿ ಮೌಲ್ಯದ ಎರಡು ಎತ್ತುಗಳನ್ನು ರಕ್ಷಿಸಿದ್ದಾರೆ. ಈ ಅಕ್ರಮದಲ್ಲಿ ಭಾಗಿಯಾಗಿದ್ದ ಮೊಹಮ್ಮದ್ ಶಿಯಾಮ್ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ.

ಪೊಲೀಸರು ಆರೋಪಿಗಳ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. “ಜಾನುವಾರುಗಳ ಮೇಲಿನ ಕ್ರೌರ್ಯವನ್ನು ಯಾವುದೇ ಹಂತದಲ್ಲೂ ಸಹಿಸುವುದಿಲ್ಲ” ಎಂದು ಪೊಲೀಸರು ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ/ಶಿರಸಿ ಅಶ್ವಿನಿ ಸರ್ಕಲ್ ಬಳಿ ಕುಮಟಾದ ವೆಂಕಟೇಶ ನಾಯ್ಕ ಎಂಬುವವರಿಂದ‌ ಅಕ್ರಮ ಟೋಕನ್ ಜೂಜಾಟ