ಸುದ್ದಿಬಿಂದು ಬ್ಯೂರೋ ವರದಿ
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ನಡುಬೀದಿಯಲ್ಲೇ ನಡೆದ ಭೀಕರ ಹತ್ಯೆ ಪ್ರಕರಣವು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಪಟ್ಟಣದ ಖಾಸಗಿ ಹೊಟೇಲ್ನಲ್ಲಿ ಜಮೀರ್ ಅಹ್ಮದ್ ದರ್ಗಾವಾಲೆ ಎಂಬ ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ನಾಲ್ವರು ದುಷ್ಕರ್ಮಿಗಳು ಮೊದಲಿಗೆ ಕಾರದ ಪುಡಿ ಎರಚಿ, ನಂತರ ಕತ್ತು ಸೀಳಿ ಬಳಿಕ ಗುಂಡು ಹಾರಿಸಿ ಜಮೀರ್ ಅವರನ್ನು ಕೊಲೆ ಮಾಡಿದ್ದಾರೆ. ಈ ದಾಳಿಯಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಜಮೀರ್ ಅವರು ಪಟ್ಟಣದಲ್ಲಿ ಪೈನಾನ್ಸ್ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. (Murder case Karnataka, brutal killing news, finance businessman murder)
ಘಟನೆಯ ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. (police investigation Karnataka, crime news updates, murder accused search)
ಈ ನಡುವೆ, ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. (SP visit crime spot, police action Karnataka, investigation updates)
ಇದನ್ನೂ ಓದಿ/ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

