ಸುದ್ದಿಬಿಂದು ಬ್ಯೂರೋ ವರದಿ
ಜೋಯಿಡಾ : ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕೋಳಗದ್ದೆ ಗ್ರಾಮದಲ್ಲಿ ವೃದ್ಧನೊಬ್ಬನ ಮೇಲೆ ಕರಡಿ ದಾಳಿ ನಡೆಸಿ ವೃದ್ಧ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳುವನ್ನು ವಿಠೋ ಪಾಟೀಲ ಎಂದು ಗುರುತಿಸಲಾಗಿದ್ದು, ಅವರನ್ನು ತಕ್ಷಣ ಜೋಯಿಡಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಠೋ ಪಾಟೀಲ ಅವರು ಮೇಯಲು ಹೋಗಿದ್ದ ಜಾನುವಾರುಗಳನ್ನು ಕರೆತರುವ ಸಲುವಾಗಿ ಕಾಡಂಚಿನ ಪ್ರದೇಶಕ್ಕೆ ತೆರಳಿದ್ದ ವೇಳೆ ಏಕಾಏಕಿ ಕರಡಿಯೊಂದು ಅವರ ಮೇಲೆ ದಾಳಿ ಮಾಡಿ. ಕಾಲಿಗೆ ಕಚ್ಚಿ ಗಂಭೀರ ಗಾಯಪಡಿಸಿದೆ.
ಸ್ಥಳೀಯರ ಸಹಾಯದಿಂದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.. ಅರಣ್ಯ ಇಲಾಖೆ ತಕ್ಷಣ ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮಸ್ಥರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

